Categories: ರಾಜ್ಯ

‘ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ’: ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!- ಮಾಜಿ ಸಿಎಂ ಕುಮಾರಸ್ವಾಮಿ

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದಿದ್ದಾರೆ.

ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ ಎಂದು ಹೇಳಿದ್ದಾರೆ.

ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

5 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

6 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

7 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

8 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

12 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

13 hours ago