Categories: ರಾಜ್ಯ

‘ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ’: ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!- ಮಾಜಿ ಸಿಎಂ ಕುಮಾರಸ್ವಾಮಿ

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದಿದ್ದಾರೆ.

ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ ಎಂದು ಹೇಳಿದ್ದಾರೆ.

ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದಿದ್ದಾರೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

3 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

4 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

6 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago