Categories: ರಾಜ್ಯ

‘ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ’: ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!- ಮಾಜಿ ಸಿಎಂ ಕುಮಾರಸ್ವಾಮಿ

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದಿದ್ದಾರೆ.

ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ ಎಂದು ಹೇಳಿದ್ದಾರೆ.

ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದಿದ್ದಾರೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago