ತಾಲೂಕಿನ ಕನಸುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನಸವಾಡಿ ಕಾಲೋನಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಿಕ್ಷಣ ಫೌಂಡೇಶನ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಅಧಿಕಾರಿಗಳು ಹಾಗೂ ಕೂಸಿನ ಮನೆ ಶಿಕ್ಷಕರು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸಹಕಾರದೊಂದಿಗೆ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ಡೆಂಗ್ಯೂ ನಿಯಂತ್ರಣಕ್ಕೆ ಯಾವ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಕಾಶ್ ರವರು ತಿಳಿಸಿಕೊಟ್ಟರು.
ಜಾಥಾ ಕಾರ್ಯಕ್ರಮದಲ್ಲಿ ಡೆಂಗ್ಯೂ ಮತ್ತು ಆರೋಗ್ಯದ ಸ್ಲೋಗನ್ ಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿ ಡಿ ಒ ರಾಮಯ್ಯ ಹಾಗೂ ಕಾರ್ಯದರ್ಶಿ ನಾಗರಾಜ್, ಮುಖ್ಯ ಶಿಕ್ಷಕರು, ಸಿ ರ್ ಪಿ, ಗ್ರಂಥಪಾಲಕರಾದ ಪೂರ್ಣಚಂದ್ರ, ಶಿಕ್ಷಣ ಫೌಂಡೇಶನ್ ಬೆಂಗಳೂರು ಗ್ರಾಮಾಂತರ ಸಂಯೋಜಕರಾದಂತ ಗಂಗಾಧರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.