ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಮಳೆಗಾಲ ಪ್ರಾರಂಭ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ, ಜಿಲ್ಲಾ ಮಟ್ಟದ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಮಟ್ಟದ ಒಂದನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು. ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿ ಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಬೇಕು. ಈ ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು.

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಆರೋಗ್ಯದ ದೃಷ್ಟಿಯಿಂದ ಗರ್ಭಿಣಿ ಹಾಗೂ ಮಕ್ಕಳಿಗೆ ಕಾಲಕಾಲಕ್ಕೆ ನೀಡುವ ಲಸಿಕೆಗಳು ಪಡೆಯುತ್ತಿದ್ದಾರಾ ಎಂಬುದರ ಬಗ್ಗೆ ಗಮನ ಹರಿಸಬೇಕು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಎಂದರು.

ರೇಬೀಸ್, ಹಾವು ಕಚ್ಚುವಿಕೆ, ನಾಯಿ ಕಚ್ಚಿದಾಗ ನೀಡುವಂತಹ ಲಸಿಕೆಗಳು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಿ, ಈ ರೀತಿಯ ಪ್ರಕರಣಗಳು ಕಂಡು ಬಂದಾಗ ಸೂಕ್ತ ಚಿಕಿತ್ಸೆ ಅತ್ಯಗತ್ಯ. ಹಾಗಾಗಿ ಔಷಧಿ ಕೊರತೆಯೇ ಯಾಗದಂತೆ ನೋಡಿಕೊಳ್ಳಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಕಾರಿ ಲಕ್ಕ ಕೃಷ್ಣ ರೆಡ್ಡಿ, ಡಾ. ಸಿಮಾ, ಡಾ.ಹೇಮಾವತಿ, ಡಾ.ಕೋಮಲ, ಜಿಲ್ಲಾ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

9 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago