ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು, ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ಮಲೇರಿಯಾ ದಿನಾಚರಣೆ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಕೇಂದ್ರಗಳಲ್ಲಿ ರಕ್ತ ಲೇಪನ ಸಂಗ್ರಹ ಕಾರ್ಯ ಹೆಚ್ಚು, ಹೆಚ್ಚು ಆದಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ಜ್ವರದಂತಹ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ ಶೀಘ್ರ ಚಿಕಿತ್ಸೆ ಕೈಗೊಳ್ಳಬಹುದು. ಆದ್ದರಿಂದ, ಈ ಎಲ್ಲಾ ಜ್ವರ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಿ ರೋಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಕಲ್ಲು ಗಣಿಗಾರಿಕೆಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಹೊರ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಗೆ ಕಡ್ಡಾಯ ರಕ್ತಲೇಪನ ಸಂಗ್ರಹಿಸಿ ದೃಢಪಟ್ಟ ಪ್ರಕರಣಗಳಿಗೆ ವೈದ್ಯಾಧಿಕಾರಿಗಳು ತ್ವರಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿ ಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದರು.

ಆರೋಗ್ಯ ಇಲಾಖೆ ಪೋಸ್ಟರ್, ಬ್ಯಾನರ್‌ಗಳ ಮೂಲಕ, ಮಾಹಿತಿ- ಶಿಕ್ಷಣ-ಸಂವಹನ ಚಟುವಟಿಕೆಗಳ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಚರಿಕೆ ಹಾಗೂ ಜನಜಾಗೃತಿ ಮೂಡಿಸಬೇಕು ಎಂದರು.

ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತ ವಾದ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡುವುದು, ಗುಂಡಿಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕೊಳವೆಬಾವಿಗಳಿಂದ ಅಥವಾ ಸಾರ್ವಜನಿಕ ನಲ್ಲಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದಲ್ಲಿ ದುರಸ್ತಿಗೊಳಿಸಿ ಸರಬರಾಜು ಮಾಡುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವುದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಾಮ-ನಗರ ಪ್ರದೇಶಗಳಲ್ಲಿ ಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳು, ನೀರು ಶೇಖರಣೆ ಗೊಳ್ಳುವ ಇತರೆ ಅನುಪಯುಕ್ತ ವಸ್ತುಗಳ ಸೂಕ್ತ ವಿಲೇವಾರಿ ಕೈಗೊಳ್ಳುವುದು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸುವುದು.
ಸರ್ಕಾರಿ ಖಾಸಗಿ ಕಟ್ಟಡ ಕಾಮಗಾರಿಗಳಲ್ಲಿ ತೊಡಗುವ ವಲಸೆ ಕಾರ್ಮಿಕರನ್ನು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಪಾಸಣೆ ಮಾಡುವುದು, ವಸತಿ ನಿಲಯಗಳ, ಸಮುಚ್ಚಯಗಳ ಒಳಾಂಗಣ ಹೊರಾಂಗಣಗಳಲ್ಲಿ ಶುಚಿತ್ವ ಕಾಪಾಡುವುದು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರೋಗ ನಿಯಂತ್ರಣಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಅವರು ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

18 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

23 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago