ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು, ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ಮಲೇರಿಯಾ ದಿನಾಚರಣೆ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಕೇಂದ್ರಗಳಲ್ಲಿ ರಕ್ತ ಲೇಪನ ಸಂಗ್ರಹ ಕಾರ್ಯ ಹೆಚ್ಚು, ಹೆಚ್ಚು ಆದಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ಜ್ವರದಂತಹ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ ಶೀಘ್ರ ಚಿಕಿತ್ಸೆ ಕೈಗೊಳ್ಳಬಹುದು. ಆದ್ದರಿಂದ, ಈ ಎಲ್ಲಾ ಜ್ವರ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಿ ರೋಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಕಲ್ಲು ಗಣಿಗಾರಿಕೆಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಹೊರ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಗೆ ಕಡ್ಡಾಯ ರಕ್ತಲೇಪನ ಸಂಗ್ರಹಿಸಿ ದೃಢಪಟ್ಟ ಪ್ರಕರಣಗಳಿಗೆ ವೈದ್ಯಾಧಿಕಾರಿಗಳು ತ್ವರಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿ ಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದರು.
ಆರೋಗ್ಯ ಇಲಾಖೆ ಪೋಸ್ಟರ್, ಬ್ಯಾನರ್ಗಳ ಮೂಲಕ, ಮಾಹಿತಿ- ಶಿಕ್ಷಣ-ಸಂವಹನ ಚಟುವಟಿಕೆಗಳ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಚರಿಕೆ ಹಾಗೂ ಜನಜಾಗೃತಿ ಮೂಡಿಸಬೇಕು ಎಂದರು.
ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತ ವಾದ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡುವುದು, ಗುಂಡಿಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕೊಳವೆಬಾವಿಗಳಿಂದ ಅಥವಾ ಸಾರ್ವಜನಿಕ ನಲ್ಲಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದಲ್ಲಿ ದುರಸ್ತಿಗೊಳಿಸಿ ಸರಬರಾಜು ಮಾಡುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವುದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಾಮ-ನಗರ ಪ್ರದೇಶಗಳಲ್ಲಿ ಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳು, ನೀರು ಶೇಖರಣೆ ಗೊಳ್ಳುವ ಇತರೆ ಅನುಪಯುಕ್ತ ವಸ್ತುಗಳ ಸೂಕ್ತ ವಿಲೇವಾರಿ ಕೈಗೊಳ್ಳುವುದು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸುವುದು.
ಸರ್ಕಾರಿ ಖಾಸಗಿ ಕಟ್ಟಡ ಕಾಮಗಾರಿಗಳಲ್ಲಿ ತೊಡಗುವ ವಲಸೆ ಕಾರ್ಮಿಕರನ್ನು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಪಾಸಣೆ ಮಾಡುವುದು, ವಸತಿ ನಿಲಯಗಳ, ಸಮುಚ್ಚಯಗಳ ಒಳಾಂಗಣ ಹೊರಾಂಗಣಗಳಲ್ಲಿ ಶುಚಿತ್ವ ಕಾಪಾಡುವುದು, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರೋಗ ನಿಯಂತ್ರಣಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಅವರು ವಿವರಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…