ಡೆಡ್ಲಿ ವೀಲಿಂಗ್… ಇಬ್ಬರು ಯುವಕರು ಸ್ಥಳದಲ್ಲೇ ಡೆತ್… ಡಿಯೋ ಬೈಕಿನಲ್ಲಿ ವೀಲಿಂಗ್ ಮಾಡಲು ಹೋಗಿ ಕ್ಯಾಂಟರ್ ಗೆ ಡಿಕ್ಕಿ…

ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ, ಇಲ್ಲಿ ಇಬ್ಬರು ಯುವಕರು ಮನೆಯಲ್ಲಿ ಕಾಲೇಜಿದೆ ಎಂದು ಸುಳ್ಳು ಹೇಳಿ ಡಿಯೋ ಬೈಕ್ ಎತ್ತಿಕೊಂಡವರು ರಸ್ತೆಯಲ್ಲಿ ಡೆಡ್ಲಿ ವೀಲಿಂಗ್ ಮಾಡಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ…

ಹರ್ಭಾಜ್ (18), ಮನೋಜ್ (18) ಮೃತಪಟ್ಟ ಯುವಕರು.

ಬೆಂಗಳೂರು ಗ್ರಾಮಾಂತರ‌ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳಾದ ಈ ಯುವಕರಿಬ್ಬರು ಡೆಡ್ಲಿ ವಿಲೀಂಗ್ ಮಾಡಲು ಹೋಗಿ ಪ್ರಾಣವನ್ನೆ ಕಳೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ನಿಧನದ ಹಿನ್ನೆಲೆ ಇಂದು ರಜೆ ಇತ್ತು. ಆದ್ರೆ ಮನೆಯಲ್ಲಿ ಕಾಲೇಜಿಗೆ ಹೋಗಿ ಬರ್ತಿನಿ ಅಂತಾ ಮೃತ ಹರ್ಬಾಜ್ ಮನೆಯಲ್ಲಿದ್ದ ಡಿಯೋ ಬೈಕ್ ಎತ್ತಿಕೊಂಡು ಸ್ನೇಹಿತ ಮನೋಜ್ನನ್ನ ಕರೆದುಕೊಂಡು ಜಂಗಮಕೋಟೆ ಬಳಿಯ ಕಾಲೇಜು ಬಳಿ ಹೋಗಿದ್ದಾರೆ. ನಂತರ ಅಲ್ಲಿಂದ ವಿಜಯಪುರ ಬೈಪಾಸ್ ನಲ್ಲಿ ಡೆಡ್ಲಿ ವೀಲಿಂಗ್ ಗೆ ಮುಂದಾಗಿದ್ದು, ನೋಡ ನೋಡುತ್ತಿದ್ದಂತೆ ಮುಂದೆ ಬರುತ್ತಿದ್ದ ಕ್ಯಾಂಟರ್ಗೆ ಡಿಯೋ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ರಸ್ತೆಗೆ ಬಿದ್ದ ಯುವಕರು ತೀವ್ರ ರಕ್ತಸ್ತಾವ್ರವಾಗಿ ಇಬ್ಬರ ಪ್ರಾಣಪಕ್ಷಿ ಹಾರಿ ಹೋಗಿದೆ. ಅದೃಷ್ಟವಷತ್ ಕ್ಯಾಂಟರ್ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯೋದು ತಪ್ಪಿಸಿಕೊಂಡಿದೆ.

ಬೈಕ್ ವೀಲಿಂಗ್ ನಿಂದ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿದ್ದ ಬೈಪಾಸ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವಕರ ಮೃತದೇಹಗಳನ್ನ ದೇವನಹಳ್ಳಿ ಖಾಸಗಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಇನ್ನೂ ಯುವಕರು ಸಾವನ್ನಪ್ಪುವುದಕ್ಕೂ ಮುಂಚೆ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಹೋಗ್ತಿದ್ದ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ.

ಪಟ್ಟಣದ ರಸ್ತೆಗಳಲ್ಲಿ ಇತ್ತೀಚೆಗೆ ಡೆಡ್ಲಿ ವಿಲೀಂಗ್ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಹಲವು ಭಾರಿ ಪೊಲೀಸರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಜೊತೆಗೆ ಪ್ರಮುಖ ರಸ್ತೆಯಲ್ಲಿ ಸಿಸಿಟಿವಿ ಅಳವಡಿಸಿ ಇಂತಹ ಡೆಡ್ಲಿ ವಿಲೀಂಗ್ ಮಾಡುವವರ ವಿರುದ್ದ ಪೊಲೀಸರು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಒಟ್ಟಾರೆ… ರಜೆ ಇದ್ದರು ಕಾಲೇಜಿಗೆ ಹೋಗಿ ಬರ್ತಿನಿ ಅಂತಾ ಇಬ್ಬರು ಯುವಕರು ಬೈಕ್ ನಲ್ಲಿ ರಸ್ತೆಗಿಳಿದು ಡೆಡ್ಲಿ ವೀಲಿಂಗ್ ಮಾಡಲು ಹೋಗಿ ಯುವಕರ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆಡ್ಲಿ ವೀಲಿಂಗ್ ಮಾಡೋರ ವಿರುದ್ದ ಇನ್ನಾದರೂ ಕ್ರಮಕ್ಕೆ ಮುಂದಾಗಬೇಕಿದೆ. ಜೊತೆಗೆ ಮೈಮರೆತು ಡೆಡ್ಲಿ ವೀಲಿಂಗ್ ಮಾಡೋ ಯುವಕರು ಈ ಬಗ್ಗೆ ಎಚ್ಚೆತ್ತುಕೊಂಡರೆ ಒಳಿತು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

6 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

6 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

7 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

10 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

12 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

17 hours ago