ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ, ಇಲ್ಲಿ ಇಬ್ಬರು ಯುವಕರು ಮನೆಯಲ್ಲಿ ಕಾಲೇಜಿದೆ ಎಂದು ಸುಳ್ಳು ಹೇಳಿ ಡಿಯೋ ಬೈಕ್ ಎತ್ತಿಕೊಂಡವರು ರಸ್ತೆಯಲ್ಲಿ ಡೆಡ್ಲಿ ವೀಲಿಂಗ್ ಮಾಡಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ…
ಹರ್ಭಾಜ್ (18), ಮನೋಜ್ (18) ಮೃತಪಟ್ಟ ಯುವಕರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳಾದ ಈ ಯುವಕರಿಬ್ಬರು ಡೆಡ್ಲಿ ವಿಲೀಂಗ್ ಮಾಡಲು ಹೋಗಿ ಪ್ರಾಣವನ್ನೆ ಕಳೆದುಕೊಂಡಿದ್ದಾರೆ.
ಮಾಜಿ ಪ್ರಧಾನಿ ನಿಧನದ ಹಿನ್ನೆಲೆ ಇಂದು ರಜೆ ಇತ್ತು. ಆದ್ರೆ ಮನೆಯಲ್ಲಿ ಕಾಲೇಜಿಗೆ ಹೋಗಿ ಬರ್ತಿನಿ ಅಂತಾ ಮೃತ ಹರ್ಬಾಜ್ ಮನೆಯಲ್ಲಿದ್ದ ಡಿಯೋ ಬೈಕ್ ಎತ್ತಿಕೊಂಡು ಸ್ನೇಹಿತ ಮನೋಜ್ನನ್ನ ಕರೆದುಕೊಂಡು ಜಂಗಮಕೋಟೆ ಬಳಿಯ ಕಾಲೇಜು ಬಳಿ ಹೋಗಿದ್ದಾರೆ. ನಂತರ ಅಲ್ಲಿಂದ ವಿಜಯಪುರ ಬೈಪಾಸ್ ನಲ್ಲಿ ಡೆಡ್ಲಿ ವೀಲಿಂಗ್ ಗೆ ಮುಂದಾಗಿದ್ದು, ನೋಡ ನೋಡುತ್ತಿದ್ದಂತೆ ಮುಂದೆ ಬರುತ್ತಿದ್ದ ಕ್ಯಾಂಟರ್ಗೆ ಡಿಯೋ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ರಸ್ತೆಗೆ ಬಿದ್ದ ಯುವಕರು ತೀವ್ರ ರಕ್ತಸ್ತಾವ್ರವಾಗಿ ಇಬ್ಬರ ಪ್ರಾಣಪಕ್ಷಿ ಹಾರಿ ಹೋಗಿದೆ. ಅದೃಷ್ಟವಷತ್ ಕ್ಯಾಂಟರ್ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯೋದು ತಪ್ಪಿಸಿಕೊಂಡಿದೆ.
ಬೈಕ್ ವೀಲಿಂಗ್ ನಿಂದ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿದ್ದ ಬೈಪಾಸ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕರ ಮೃತದೇಹಗಳನ್ನ ದೇವನಹಳ್ಳಿ ಖಾಸಗಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಇನ್ನೂ ಯುವಕರು ಸಾವನ್ನಪ್ಪುವುದಕ್ಕೂ ಮುಂಚೆ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಹೋಗ್ತಿದ್ದ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ.
ಪಟ್ಟಣದ ರಸ್ತೆಗಳಲ್ಲಿ ಇತ್ತೀಚೆಗೆ ಡೆಡ್ಲಿ ವಿಲೀಂಗ್ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಹಲವು ಭಾರಿ ಪೊಲೀಸರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಒಟ್ಟಾರೆ… ರಜೆ ಇದ್ದರು ಕಾಲೇಜಿಗೆ ಹೋಗಿ ಬರ್ತಿನಿ ಅಂತಾ ಇಬ್ಬರು ಯುವಕರು ಬೈಕ್ ನಲ್ಲಿ ರಸ್ತೆಗಿಳಿದು ಡೆಡ್ಲಿ ವೀಲಿಂಗ್ ಮಾಡಲು ಹೋಗಿ ಯುವಕರ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆಡ್ಲಿ ವೀಲಿಂಗ್ ಮಾಡೋರ ವಿರುದ್ದ ಇನ್ನಾದರೂ ಕ್ರಮಕ್ಕೆ ಮುಂದಾಗಬೇಕಿದೆ. ಜೊತೆಗೆ ಮೈಮರೆತು ಡೆಡ್ಲಿ ವೀಲಿಂಗ್ ಮಾಡೋ ಯುವಕರು ಈ ಬಗ್ಗೆ ಎಚ್ಚೆತ್ತುಕೊಂಡರೆ ಒಳಿತು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…