ಡೆಡ್ಲಿ ವೀಲಿಂಗ್… ಇಬ್ಬರು ಯುವಕರು ಸ್ಥಳದಲ್ಲೇ ಡೆತ್… ಡಿಯೋ ಬೈಕಿನಲ್ಲಿ ವೀಲಿಂಗ್ ಮಾಡಲು ಹೋಗಿ ಕ್ಯಾಂಟರ್ ಗೆ ಡಿಕ್ಕಿ…

ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ, ಇಲ್ಲಿ ಇಬ್ಬರು ಯುವಕರು ಮನೆಯಲ್ಲಿ ಕಾಲೇಜಿದೆ ಎಂದು ಸುಳ್ಳು ಹೇಳಿ ಡಿಯೋ ಬೈಕ್ ಎತ್ತಿಕೊಂಡವರು ರಸ್ತೆಯಲ್ಲಿ ಡೆಡ್ಲಿ ವೀಲಿಂಗ್ ಮಾಡಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ…

ಹರ್ಭಾಜ್ (18), ಮನೋಜ್ (18) ಮೃತಪಟ್ಟ ಯುವಕರು.

ಬೆಂಗಳೂರು ಗ್ರಾಮಾಂತರ‌ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳಾದ ಈ ಯುವಕರಿಬ್ಬರು ಡೆಡ್ಲಿ ವಿಲೀಂಗ್ ಮಾಡಲು ಹೋಗಿ ಪ್ರಾಣವನ್ನೆ ಕಳೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ನಿಧನದ ಹಿನ್ನೆಲೆ ಇಂದು ರಜೆ ಇತ್ತು. ಆದ್ರೆ ಮನೆಯಲ್ಲಿ ಕಾಲೇಜಿಗೆ ಹೋಗಿ ಬರ್ತಿನಿ ಅಂತಾ ಮೃತ ಹರ್ಬಾಜ್ ಮನೆಯಲ್ಲಿದ್ದ ಡಿಯೋ ಬೈಕ್ ಎತ್ತಿಕೊಂಡು ಸ್ನೇಹಿತ ಮನೋಜ್ನನ್ನ ಕರೆದುಕೊಂಡು ಜಂಗಮಕೋಟೆ ಬಳಿಯ ಕಾಲೇಜು ಬಳಿ ಹೋಗಿದ್ದಾರೆ. ನಂತರ ಅಲ್ಲಿಂದ ವಿಜಯಪುರ ಬೈಪಾಸ್ ನಲ್ಲಿ ಡೆಡ್ಲಿ ವೀಲಿಂಗ್ ಗೆ ಮುಂದಾಗಿದ್ದು, ನೋಡ ನೋಡುತ್ತಿದ್ದಂತೆ ಮುಂದೆ ಬರುತ್ತಿದ್ದ ಕ್ಯಾಂಟರ್ಗೆ ಡಿಯೋ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ರಸ್ತೆಗೆ ಬಿದ್ದ ಯುವಕರು ತೀವ್ರ ರಕ್ತಸ್ತಾವ್ರವಾಗಿ ಇಬ್ಬರ ಪ್ರಾಣಪಕ್ಷಿ ಹಾರಿ ಹೋಗಿದೆ. ಅದೃಷ್ಟವಷತ್ ಕ್ಯಾಂಟರ್ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯೋದು ತಪ್ಪಿಸಿಕೊಂಡಿದೆ.

ಬೈಕ್ ವೀಲಿಂಗ್ ನಿಂದ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿದ್ದ ಬೈಪಾಸ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವಕರ ಮೃತದೇಹಗಳನ್ನ ದೇವನಹಳ್ಳಿ ಖಾಸಗಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಇನ್ನೂ ಯುವಕರು ಸಾವನ್ನಪ್ಪುವುದಕ್ಕೂ ಮುಂಚೆ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಹೋಗ್ತಿದ್ದ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ.

ಪಟ್ಟಣದ ರಸ್ತೆಗಳಲ್ಲಿ ಇತ್ತೀಚೆಗೆ ಡೆಡ್ಲಿ ವಿಲೀಂಗ್ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಹಲವು ಭಾರಿ ಪೊಲೀಸರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಜೊತೆಗೆ ಪ್ರಮುಖ ರಸ್ತೆಯಲ್ಲಿ ಸಿಸಿಟಿವಿ ಅಳವಡಿಸಿ ಇಂತಹ ಡೆಡ್ಲಿ ವಿಲೀಂಗ್ ಮಾಡುವವರ ವಿರುದ್ದ ಪೊಲೀಸರು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಒಟ್ಟಾರೆ… ರಜೆ ಇದ್ದರು ಕಾಲೇಜಿಗೆ ಹೋಗಿ ಬರ್ತಿನಿ ಅಂತಾ ಇಬ್ಬರು ಯುವಕರು ಬೈಕ್ ನಲ್ಲಿ ರಸ್ತೆಗಿಳಿದು ಡೆಡ್ಲಿ ವೀಲಿಂಗ್ ಮಾಡಲು ಹೋಗಿ ಯುವಕರ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆಡ್ಲಿ ವೀಲಿಂಗ್ ಮಾಡೋರ ವಿರುದ್ದ ಇನ್ನಾದರೂ ಕ್ರಮಕ್ಕೆ ಮುಂದಾಗಬೇಕಿದೆ. ಜೊತೆಗೆ ಮೈಮರೆತು ಡೆಡ್ಲಿ ವೀಲಿಂಗ್ ಮಾಡೋ ಯುವಕರು ಈ ಬಗ್ಗೆ ಎಚ್ಚೆತ್ತುಕೊಂಡರೆ ಒಳಿತು.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

1 hour ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

5 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

17 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

18 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

18 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

22 hours ago