ಶಿವಮೊಗ್ಗ : ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತರನ್ನು ಹೆಡ್ ಕಾನ್ಸ್ಟೇಬಲ್ ಮುಹಮ್ಮದ್ ಝಕ್ರಿಯಾ (55) ಎಂದು ಗುರುತಿಸಲಾಗಿದೆ.
ರಾತ್ರಿ ವೇಳೆ ಪಶ್ಚಿಮ ಸಂಚಾರ ಠಾಣೆಯ ಹಿಂಬದಿ ಸೆಲ್ಗಳಿರುವ ಪ್ರದೇಶದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಮೃತರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ
ಡೆತ್ ನೋಟ್ ನಲ್ಲಿ ಏನಿದೆ?
ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್ ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೆ ನಮಸ್ಕಾರಗಳು ನಾನು ಇಲಾಖೆಯಲ್ಲಿ 26 ವರ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ಕಳೆದ ಒಂದು ವರ್ಷದಿಂದ ನಮ್ಮ ಠಾಣೆಯ ನಾಸೀರ್ ಅಹಮದ್ (ಹೆಚ್ಸಿ 131) ಅವರು ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಜಗಳ ಮಾಡಿ ನನ್ನ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ನೋವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…