ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದು ನೇಣಿಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ

ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ.

ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.

 ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ.

ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಡೆತ್ ನೋಟ್ ವಿವರ

ನಾನು ಯಾರಿಗೂ ಮೋಸ ಮಾಡಿಲ್ಲ….

ಮಿಸ್ ಯು ಆಲ್ ಫ್ರೆಂಡ್ಸ್….

ಬುಜ್ಜಿ ಐ ಮಿಸ್ ಯು… ಮಾ ಐ ಲವ್ ಯು‌ ಸೊ ಮಚ್ ಮಾ…

ನಾನು ಇನ್ನೂ ಈ‌ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ…

ಎಲ್ಲರೂ ಖುಷಿಯಾಗಿರಿ ಎಂದು ಬರೆದಿದ್ದಾರೆ.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

4 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

5 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

10 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

22 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

23 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

23 hours ago