ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ.
ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.
ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ.
ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಡೆತ್ ನೋಟ್ ವಿವರ
ನಾನು ಯಾರಿಗೂ ಮೋಸ ಮಾಡಿಲ್ಲ….
ಮಿಸ್ ಯು ಆಲ್ ಫ್ರೆಂಡ್ಸ್….
ಬುಜ್ಜಿ ಐ ಮಿಸ್ ಯು… ಮಾ ಐ ಲವ್ ಯು ಸೊ ಮಚ್ ಮಾ…
ನಾನು ಇನ್ನೂ ಈ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ…
ಎಲ್ಲರೂ ಖುಷಿಯಾಗಿರಿ ಎಂದು ಬರೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…