ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದು ನೇಣಿಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ

ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ.

ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.

 ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ.

ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಡೆತ್ ನೋಟ್ ವಿವರ

ನಾನು ಯಾರಿಗೂ ಮೋಸ ಮಾಡಿಲ್ಲ….

ಮಿಸ್ ಯು ಆಲ್ ಫ್ರೆಂಡ್ಸ್….

ಬುಜ್ಜಿ ಐ ಮಿಸ್ ಯು… ಮಾ ಐ ಲವ್ ಯು‌ ಸೊ ಮಚ್ ಮಾ…

ನಾನು ಇನ್ನೂ ಈ‌ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ…

ಎಲ್ಲರೂ ಖುಷಿಯಾಗಿರಿ ಎಂದು ಬರೆದಿದ್ದಾರೆ.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

20 minutes ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

3 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

21 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago