ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡ ಡೆಲ್ಲಿ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 203 ರನ್ ಗಳಿಗೆ ಕಟ್ಟಿ ಹಾಕಿತು.
ಉತ್ತಮ ರನ್ ಟಾರ್ಗೆಟ್ ನ್ನು ಬೆನ್ನಟ್ಟಿದ ಆರ್ ಸಿಗೆ ಗ್ರೇಸ್ ಹ್ಯಾರೀಸ್ 7 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್ ನತ್ತ ನಡೆದಿದ್ದು, ಆರಂಭಿಕ ಆಘಾತವಾಗಿತ್ತು. ಆದರೆ ಸ್ಮೃತಿ ಮಂಧಾನ 42 ಎಸೆತಗಳಲ್ಲಿ 87 ರನ್ ಹಾಗೂ ಜಾರ್ಜಿಯಾ ವೋಲ್ 54 ಎಸೆತಗಳಲ್ಲಿ 79 ರನ್ ಗಳಿಸಿದ್ದು ತಂಡದ ಗೆಲುವಿಗೆ ಭದ್ರ ಬುನಾದಿಯಾಯಿತು
ಕ್ರೀಸ್ ನಲ್ಲಿದ್ದ ನಡಿನ್ ಡಿ ಕ್ಲರ್ಕ್, ರಾಧಾ ಯಾದವ್ ತಂಡವನ್ನು ಗೆಲುವಿನ ದಡ ಸೇರಿಸಿದರು. ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ.
ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…