ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ಮುಡಿಗೇರಿಸಿಕೊಂಡ ಆರ್ ಸಿಬಿ

ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡ ಡೆಲ್ಲಿ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 203 ರನ್ ಗಳಿಗೆ ಕಟ್ಟಿ ಹಾಕಿತು.

ಉತ್ತಮ ರನ್ ಟಾರ್ಗೆಟ್ ನ್ನು ಬೆನ್ನಟ್ಟಿದ ಆರ್ ಸಿಗೆ ಗ್ರೇಸ್ ಹ್ಯಾರೀಸ್ 7 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್ ನತ್ತ ನಡೆದಿದ್ದು, ಆರಂಭಿಕ ಆಘಾತವಾಗಿತ್ತು. ಆದರೆ ಸ್ಮೃತಿ ಮಂಧಾನ 42 ಎಸೆತಗಳಲ್ಲಿ 87 ರನ್ ಹಾಗೂ ಜಾರ್ಜಿಯಾ ವೋಲ್ 54 ಎಸೆತಗಳಲ್ಲಿ 79 ರನ್ ಗಳಿಸಿದ್ದು ತಂಡದ ಗೆಲುವಿಗೆ ಭದ್ರ ಬುನಾದಿಯಾಯಿತು

ಕ್ರೀಸ್ ನಲ್ಲಿದ್ದ ನಡಿನ್ ಡಿ ಕ್ಲರ್ಕ್, ರಾಧಾ ಯಾದವ್ ತಂಡವನ್ನು ಗೆಲುವಿನ ದಡ ಸೇರಿಸಿದರು. ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ.

ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

4 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

5 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

16 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

16 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

16 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago