ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ಮುಡಿಗೇರಿಸಿಕೊಂಡ ಆರ್ ಸಿಬಿ

ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡ ಡೆಲ್ಲಿ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 203 ರನ್ ಗಳಿಗೆ ಕಟ್ಟಿ ಹಾಕಿತು.

ಉತ್ತಮ ರನ್ ಟಾರ್ಗೆಟ್ ನ್ನು ಬೆನ್ನಟ್ಟಿದ ಆರ್ ಸಿಗೆ ಗ್ರೇಸ್ ಹ್ಯಾರೀಸ್ 7 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್ ನತ್ತ ನಡೆದಿದ್ದು, ಆರಂಭಿಕ ಆಘಾತವಾಗಿತ್ತು. ಆದರೆ ಸ್ಮೃತಿ ಮಂಧಾನ 42 ಎಸೆತಗಳಲ್ಲಿ 87 ರನ್ ಹಾಗೂ ಜಾರ್ಜಿಯಾ ವೋಲ್ 54 ಎಸೆತಗಳಲ್ಲಿ 79 ರನ್ ಗಳಿಸಿದ್ದು ತಂಡದ ಗೆಲುವಿಗೆ ಭದ್ರ ಬುನಾದಿಯಾಯಿತು

ಕ್ರೀಸ್ ನಲ್ಲಿದ್ದ ನಡಿನ್ ಡಿ ಕ್ಲರ್ಕ್, ರಾಧಾ ಯಾದವ್ ತಂಡವನ್ನು ಗೆಲುವಿನ ದಡ ಸೇರಿಸಿದರು. ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ.

ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago