ಡೇಟಿಂಗ್ ಆ್ಯಪ್ ಯೂಸ್ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ ಮಾಡುತ್ತಿದ್ದಾರೆ.
ಕಾಮುಕರ ಅಟ್ಟಹಾಸಕ್ಕೆ ಡೇಟಿಂಗ್ ಆ್ಯಪ್ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ್ಯಪ್ ಫ್ರೋಫೈಲ್ ನಲ್ಲಿ ಹೀರೋ ರೀತಿ ಫೋಟೊ ಅಪ್ಲೋಡ್ ಮಾಡಿ, ಹುಡುಗಿಯರ ಸ್ನೇಹ ಬೆಳೆಸಿ ಮದುವೆ ಆಗುವ ನಾಟಕವಾಡೋದು.
ಯುವತಿಯೊಬ್ಬಳು ಬಂಬಲ್ ಆ್ಯಪ್ ನಲ್ಲಿ ಸಂಗಾತಿಯನ್ನ ಹುಡುಕುತ್ತಿದ್ದಳು. ಈ ವೇಳೆ ಅನಿರುದ್ದ್ ಎಂಬಾತನ ಫ್ರೋಫೈಲ್ ನಿಂದ ಮೆಸೇಜ್ ಯುವತಿಗೆ ಬಂದಿದೆ. ಅನಿರುದ್ದ್ ಚಾಟಿಂಗ್ ಮೂಲಕ ಯುವತಿಯ ಗಮನ ಸೆಳೆದಿದ್ದನು, ನಂತರ ಮುಖಾಮುಖಿ ಭೇಟಿಯಾದಾಗ ಯುವತಿ ಶಾಕ್ ಆಗಿದ್ದಾಳೆ. ಸ್ಥಳದಲ್ಲಿ ಅನಿರುದ್ಧ್ ನನ್ನು ನೋಡಿದಾಗ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಆತ ಅನಿರುದ್ದ್ ಅಲ್ಲ ಮುದಾಸಿರ್ ಎಂಬುದು ಗೊತ್ತಾಗಿದೆ. ಈ ವೇಳೆ ಆತ ನೀನು ನನ್ನನ್ನ ಪ್ರೀತಿಸುವುದಿಲ್ಲ ಅಂದುಕೊಂಡು ಈ ರೀತಿ ಮಾಡಿದ್ದೇನೆ ಎಂದು ಮನವೊಲಿಸಿದ್ದನು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.
ತನ್ನ ತಾಯಿಗೆ ಹುಷಾರಿಲ್ಲ ಎಂದು ಯುವತಿ ಬಳಿ 1 ಲಕ್ಷ ಹಣ ಪೀಕಿದ್ದ, ಹಣ ಕೊಟ್ಟ ಒಂದು ತಿಂಗಳ ನಂತ ತನ್ನ ತಾಯಿ ತೀರಿ ಹೋಗಿದ್ದಾಳೆ ಎಂದು ನಾಟಕ ಮಾಡಿದ್ದನು. ನಾನು ನನ್ನ ತಮ್ಮನನ್ನ ನೋಡಲು ದುಬೈಗೆ ಹೋಗಿ ಬರುತ್ತೇನೆ ಎಂದು ಕಥೆ ಕಟ್ಟಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು, ನಂತರ ಕಾಮುಕ ಮುದಾಸಿರ್ ನ ಪತ್ತೆಗೆ ಯುವತಿ ಮುಂದಾಗಿದ್ದಳು. ಮುದಾಸಿರ್ ಸಹೋದರನನ್ನ ಸಂಪರ್ಕಿಸಿದ್ದಾಗ, ಆತನ ತಾಯಿ ತೀರಿ ಹೋಗಿಲ್ಲ ತಾಯಿ ಕಾಶ್ಮೀರದಲ್ಲಿ ವಾಸ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.
ಮುದಾಸಿರ್ ಬೆಂಗಳೂರಲ್ಲೇ ವಾಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿಯನ್ನ ಕಲೆ ಹಾಕಿದ ಯುವತಿ, ಮನೆ ಬಳಿ ಹೋದಾಗ ಯುವತಿ ಗೊತ್ತಾಗಿದೆ, ಉದಾಸಿರ್ ಮದುವೆಯಾಗಿ ಹೆಂಡತಿ ಜೊತೆ ವಾಸವಿದ್ದನು ಎಂಬುದು. ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು, ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…