ಡೇಟಿಂಗ್ ಆ್ಯಪ್ ಬಳಕೆ ಮಾಡುತ್ತಿರುವ ಯುವತಿಯರೇ ಎಚ್ಚರ ಎಚ್ಚರ..! ಡೇಟಿಂಗ್ ಆ್ಯಪ್ ನಲ್ಲಿ ಆಕ್ಟಿವ್ ಆಗಿದ್ದಾರೆ ಕಾಮುಕರು: ಡೇಟಿಂಗ್ ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ

ಡೇಟಿಂಗ್ ಆ್ಯಪ್ ಯೂಸ್​ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ ಮಾಡುತ್ತಿದ್ದಾರೆ.

ಕಾಮುಕರ ಅಟ್ಟಹಾಸಕ್ಕೆ ಡೇಟಿಂಗ್ ಆ್ಯಪ್​ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ್ಯಪ್​ ಫ್ರೋಫೈಲ್ ನಲ್ಲಿ ಹೀರೋ ರೀತಿ ಫೋಟೊ ಅಪ್ಲೋಡ್ ಮಾಡಿ, ಹುಡುಗಿಯರ ಸ್ನೇಹ ಬೆಳೆಸಿ ಮದುವೆ ಆಗುವ ನಾಟಕವಾಡೋದು.

ಯುವತಿಯೊಬ್ಬಳು ಬಂಬಲ್ ಆ್ಯಪ್ ನಲ್ಲಿ ಸಂಗಾತಿಯನ್ನ ಹುಡುಕುತ್ತಿದ್ದಳು. ಈ ವೇಳೆ ಅನಿರುದ್ದ್ ಎಂಬಾತನ ಫ್ರೋಫೈಲ್ ನಿಂದ ಮೆಸೇಜ್​ ಯುವತಿಗೆ ಬಂದಿದೆ. ಅನಿರುದ್ದ್ ಚಾಟಿಂಗ್ ಮೂಲಕ ಯುವತಿಯ ಗಮನ ಸೆಳೆದಿದ್ದನು, ನಂತರ ಮುಖಾಮುಖಿ ಭೇಟಿಯಾದಾಗ ಯುವತಿ ಶಾಕ್ ಆಗಿದ್ದಾಳೆ. ಸ್ಥಳದಲ್ಲಿ ಅನಿರುದ್ಧ್ ನನ್ನು ನೋಡಿದಾಗ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಆತ ಅನಿರುದ್ದ್ ಅಲ್ಲ ಮುದಾಸಿರ್ ಎಂಬುದು ಗೊತ್ತಾಗಿದೆ. ಈ ವೇಳೆ ಆತ ನೀನು ನನ್ನನ್ನ ಪ್ರೀತಿಸುವುದಿಲ್ಲ ಅಂದುಕೊಂಡು ಈ ರೀತಿ ಮಾಡಿದ್ದೇನೆ ಎಂದು ಮನವೊಲಿಸಿದ್ದನು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.

ತನ್ನ ತಾಯಿಗೆ ಹುಷಾರಿಲ್ಲ ಎಂದು ಯುವತಿ ಬಳಿ 1 ಲಕ್ಷ ಹಣ ಪೀಕಿದ್ದ, ಹಣ ಕೊಟ್ಟ ಒಂದು ತಿಂಗಳ ನಂತ ತನ್ನ ತಾಯಿ ತೀರಿ ಹೋಗಿದ್ದಾಳೆ ಎಂದು ನಾಟಕ ಮಾಡಿದ್ದನು. ನಾನು ನನ್ನ ತಮ್ಮನನ್ನ ನೋಡಲು ದುಬೈಗೆ ಹೋಗಿ ಬರುತ್ತೇನೆ ಎಂದು ಕಥೆ ಕಟ್ಟಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು, ನಂತರ ಕಾಮುಕ ಮುದಾಸಿರ್ ನ ಪತ್ತೆಗೆ ಯುವತಿ ಮುಂದಾಗಿದ್ದಳು. ಮುದಾಸಿರ್ ಸಹೋದರನನ್ನ ಸಂಪರ್ಕಿಸಿದ್ದಾಗ, ಆತನ ತಾಯಿ ತೀರಿ ಹೋಗಿಲ್ಲ ತಾಯಿ ಕಾಶ್ಮೀರದಲ್ಲಿ ವಾಸ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಮುದಾಸಿರ್ ಬೆಂಗಳೂರಲ್ಲೇ ವಾಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿಯನ್ನ ಕಲೆ‌ ಹಾಕಿದ ಯುವತಿ, ಮನೆ ಬಳಿ ಹೋದಾಗ ಯುವತಿ ಗೊತ್ತಾಗಿದೆ, ಉದಾಸಿರ್ ಮದುವೆಯಾಗಿ ಹೆಂಡತಿ ಜೊತೆ ವಾಸವಿದ್ದನು ಎಂಬುದು. ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು, ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

8 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

8 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

9 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

9 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

11 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

13 hours ago