ಡೇಟಿಂಗ್ ಆ್ಯಪ್ ಬಳಕೆ ಮಾಡುತ್ತಿರುವ ಯುವತಿಯರೇ ಎಚ್ಚರ ಎಚ್ಚರ..! ಡೇಟಿಂಗ್ ಆ್ಯಪ್ ನಲ್ಲಿ ಆಕ್ಟಿವ್ ಆಗಿದ್ದಾರೆ ಕಾಮುಕರು: ಡೇಟಿಂಗ್ ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ

ಡೇಟಿಂಗ್ ಆ್ಯಪ್ ಯೂಸ್​ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ ಮಾಡುತ್ತಿದ್ದಾರೆ.

ಕಾಮುಕರ ಅಟ್ಟಹಾಸಕ್ಕೆ ಡೇಟಿಂಗ್ ಆ್ಯಪ್​ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ್ಯಪ್​ ಫ್ರೋಫೈಲ್ ನಲ್ಲಿ ಹೀರೋ ರೀತಿ ಫೋಟೊ ಅಪ್ಲೋಡ್ ಮಾಡಿ, ಹುಡುಗಿಯರ ಸ್ನೇಹ ಬೆಳೆಸಿ ಮದುವೆ ಆಗುವ ನಾಟಕವಾಡೋದು.

ಯುವತಿಯೊಬ್ಬಳು ಬಂಬಲ್ ಆ್ಯಪ್ ನಲ್ಲಿ ಸಂಗಾತಿಯನ್ನ ಹುಡುಕುತ್ತಿದ್ದಳು. ಈ ವೇಳೆ ಅನಿರುದ್ದ್ ಎಂಬಾತನ ಫ್ರೋಫೈಲ್ ನಿಂದ ಮೆಸೇಜ್​ ಯುವತಿಗೆ ಬಂದಿದೆ. ಅನಿರುದ್ದ್ ಚಾಟಿಂಗ್ ಮೂಲಕ ಯುವತಿಯ ಗಮನ ಸೆಳೆದಿದ್ದನು, ನಂತರ ಮುಖಾಮುಖಿ ಭೇಟಿಯಾದಾಗ ಯುವತಿ ಶಾಕ್ ಆಗಿದ್ದಾಳೆ. ಸ್ಥಳದಲ್ಲಿ ಅನಿರುದ್ಧ್ ನನ್ನು ನೋಡಿದಾಗ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಆತ ಅನಿರುದ್ದ್ ಅಲ್ಲ ಮುದಾಸಿರ್ ಎಂಬುದು ಗೊತ್ತಾಗಿದೆ. ಈ ವೇಳೆ ಆತ ನೀನು ನನ್ನನ್ನ ಪ್ರೀತಿಸುವುದಿಲ್ಲ ಅಂದುಕೊಂಡು ಈ ರೀತಿ ಮಾಡಿದ್ದೇನೆ ಎಂದು ಮನವೊಲಿಸಿದ್ದನು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.

ತನ್ನ ತಾಯಿಗೆ ಹುಷಾರಿಲ್ಲ ಎಂದು ಯುವತಿ ಬಳಿ 1 ಲಕ್ಷ ಹಣ ಪೀಕಿದ್ದ, ಹಣ ಕೊಟ್ಟ ಒಂದು ತಿಂಗಳ ನಂತ ತನ್ನ ತಾಯಿ ತೀರಿ ಹೋಗಿದ್ದಾಳೆ ಎಂದು ನಾಟಕ ಮಾಡಿದ್ದನು. ನಾನು ನನ್ನ ತಮ್ಮನನ್ನ ನೋಡಲು ದುಬೈಗೆ ಹೋಗಿ ಬರುತ್ತೇನೆ ಎಂದು ಕಥೆ ಕಟ್ಟಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು, ನಂತರ ಕಾಮುಕ ಮುದಾಸಿರ್ ನ ಪತ್ತೆಗೆ ಯುವತಿ ಮುಂದಾಗಿದ್ದಳು. ಮುದಾಸಿರ್ ಸಹೋದರನನ್ನ ಸಂಪರ್ಕಿಸಿದ್ದಾಗ, ಆತನ ತಾಯಿ ತೀರಿ ಹೋಗಿಲ್ಲ ತಾಯಿ ಕಾಶ್ಮೀರದಲ್ಲಿ ವಾಸ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಮುದಾಸಿರ್ ಬೆಂಗಳೂರಲ್ಲೇ ವಾಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿಯನ್ನ ಕಲೆ‌ ಹಾಕಿದ ಯುವತಿ, ಮನೆ ಬಳಿ ಹೋದಾಗ ಯುವತಿ ಗೊತ್ತಾಗಿದೆ, ಉದಾಸಿರ್ ಮದುವೆಯಾಗಿ ಹೆಂಡತಿ ಜೊತೆ ವಾಸವಿದ್ದನು ಎಂಬುದು. ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು, ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

35 minutes ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

12 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

20 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago