ಡೇಟಿಂಗ್ ಆ್ಯಪ್ ಯೂಸ್ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ ಮಾಡುತ್ತಿದ್ದಾರೆ.
ಕಾಮುಕರ ಅಟ್ಟಹಾಸಕ್ಕೆ ಡೇಟಿಂಗ್ ಆ್ಯಪ್ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ್ಯಪ್ ಫ್ರೋಫೈಲ್ ನಲ್ಲಿ ಹೀರೋ ರೀತಿ ಫೋಟೊ ಅಪ್ಲೋಡ್ ಮಾಡಿ, ಹುಡುಗಿಯರ ಸ್ನೇಹ ಬೆಳೆಸಿ ಮದುವೆ ಆಗುವ ನಾಟಕವಾಡೋದು.
ಯುವತಿಯೊಬ್ಬಳು ಬಂಬಲ್ ಆ್ಯಪ್ ನಲ್ಲಿ ಸಂಗಾತಿಯನ್ನ ಹುಡುಕುತ್ತಿದ್ದಳು. ಈ ವೇಳೆ ಅನಿರುದ್ದ್ ಎಂಬಾತನ ಫ್ರೋಫೈಲ್ ನಿಂದ ಮೆಸೇಜ್ ಯುವತಿಗೆ ಬಂದಿದೆ. ಅನಿರುದ್ದ್ ಚಾಟಿಂಗ್ ಮೂಲಕ ಯುವತಿಯ ಗಮನ ಸೆಳೆದಿದ್ದನು, ನಂತರ ಮುಖಾಮುಖಿ ಭೇಟಿಯಾದಾಗ ಯುವತಿ ಶಾಕ್ ಆಗಿದ್ದಾಳೆ. ಸ್ಥಳದಲ್ಲಿ ಅನಿರುದ್ಧ್ ನನ್ನು ನೋಡಿದಾಗ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಆತ ಅನಿರುದ್ದ್ ಅಲ್ಲ ಮುದಾಸಿರ್ ಎಂಬುದು ಗೊತ್ತಾಗಿದೆ. ಈ ವೇಳೆ ಆತ ನೀನು ನನ್ನನ್ನ ಪ್ರೀತಿಸುವುದಿಲ್ಲ ಅಂದುಕೊಂಡು ಈ ರೀತಿ ಮಾಡಿದ್ದೇನೆ ಎಂದು ಮನವೊಲಿಸಿದ್ದನು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.
ತನ್ನ ತಾಯಿಗೆ ಹುಷಾರಿಲ್ಲ ಎಂದು ಯುವತಿ ಬಳಿ 1 ಲಕ್ಷ ಹಣ ಪೀಕಿದ್ದ, ಹಣ ಕೊಟ್ಟ ಒಂದು ತಿಂಗಳ ನಂತ ತನ್ನ ತಾಯಿ ತೀರಿ ಹೋಗಿದ್ದಾಳೆ ಎಂದು ನಾಟಕ ಮಾಡಿದ್ದನು. ನಾನು ನನ್ನ ತಮ್ಮನನ್ನ ನೋಡಲು ದುಬೈಗೆ ಹೋಗಿ ಬರುತ್ತೇನೆ ಎಂದು ಕಥೆ ಕಟ್ಟಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು, ನಂತರ ಕಾಮುಕ ಮುದಾಸಿರ್ ನ ಪತ್ತೆಗೆ ಯುವತಿ ಮುಂದಾಗಿದ್ದಳು. ಮುದಾಸಿರ್ ಸಹೋದರನನ್ನ ಸಂಪರ್ಕಿಸಿದ್ದಾಗ, ಆತನ ತಾಯಿ ತೀರಿ ಹೋಗಿಲ್ಲ ತಾಯಿ ಕಾಶ್ಮೀರದಲ್ಲಿ ವಾಸ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.
ಮುದಾಸಿರ್ ಬೆಂಗಳೂರಲ್ಲೇ ವಾಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿಯನ್ನ ಕಲೆ ಹಾಕಿದ ಯುವತಿ, ಮನೆ ಬಳಿ ಹೋದಾಗ ಯುವತಿ ಗೊತ್ತಾಗಿದೆ, ಉದಾಸಿರ್ ಮದುವೆಯಾಗಿ ಹೆಂಡತಿ ಜೊತೆ ವಾಸವಿದ್ದನು ಎಂಬುದು. ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು, ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…