ಡೇಟಿಂಗ್ ಆ್ಯಪ್ ಬಳಕೆ ಮಾಡುತ್ತಿರುವ ಯುವತಿಯರೇ ಎಚ್ಚರ ಎಚ್ಚರ..! ಡೇಟಿಂಗ್ ಆ್ಯಪ್ ನಲ್ಲಿ ಆಕ್ಟಿವ್ ಆಗಿದ್ದಾರೆ ಕಾಮುಕರು: ಡೇಟಿಂಗ್ ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ

ಡೇಟಿಂಗ್ ಆ್ಯಪ್ ಯೂಸ್​ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ ಮಾಡುತ್ತಿದ್ದಾರೆ.

ಕಾಮುಕರ ಅಟ್ಟಹಾಸಕ್ಕೆ ಡೇಟಿಂಗ್ ಆ್ಯಪ್​ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ್ಯಪ್​ ಫ್ರೋಫೈಲ್ ನಲ್ಲಿ ಹೀರೋ ರೀತಿ ಫೋಟೊ ಅಪ್ಲೋಡ್ ಮಾಡಿ, ಹುಡುಗಿಯರ ಸ್ನೇಹ ಬೆಳೆಸಿ ಮದುವೆ ಆಗುವ ನಾಟಕವಾಡೋದು.

ಯುವತಿಯೊಬ್ಬಳು ಬಂಬಲ್ ಆ್ಯಪ್ ನಲ್ಲಿ ಸಂಗಾತಿಯನ್ನ ಹುಡುಕುತ್ತಿದ್ದಳು. ಈ ವೇಳೆ ಅನಿರುದ್ದ್ ಎಂಬಾತನ ಫ್ರೋಫೈಲ್ ನಿಂದ ಮೆಸೇಜ್​ ಯುವತಿಗೆ ಬಂದಿದೆ. ಅನಿರುದ್ದ್ ಚಾಟಿಂಗ್ ಮೂಲಕ ಯುವತಿಯ ಗಮನ ಸೆಳೆದಿದ್ದನು, ನಂತರ ಮುಖಾಮುಖಿ ಭೇಟಿಯಾದಾಗ ಯುವತಿ ಶಾಕ್ ಆಗಿದ್ದಾಳೆ. ಸ್ಥಳದಲ್ಲಿ ಅನಿರುದ್ಧ್ ನನ್ನು ನೋಡಿದಾಗ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಆತ ಅನಿರುದ್ದ್ ಅಲ್ಲ ಮುದಾಸಿರ್ ಎಂಬುದು ಗೊತ್ತಾಗಿದೆ. ಈ ವೇಳೆ ಆತ ನೀನು ನನ್ನನ್ನ ಪ್ರೀತಿಸುವುದಿಲ್ಲ ಅಂದುಕೊಂಡು ಈ ರೀತಿ ಮಾಡಿದ್ದೇನೆ ಎಂದು ಮನವೊಲಿಸಿದ್ದನು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.

ತನ್ನ ತಾಯಿಗೆ ಹುಷಾರಿಲ್ಲ ಎಂದು ಯುವತಿ ಬಳಿ 1 ಲಕ್ಷ ಹಣ ಪೀಕಿದ್ದ, ಹಣ ಕೊಟ್ಟ ಒಂದು ತಿಂಗಳ ನಂತ ತನ್ನ ತಾಯಿ ತೀರಿ ಹೋಗಿದ್ದಾಳೆ ಎಂದು ನಾಟಕ ಮಾಡಿದ್ದನು. ನಾನು ನನ್ನ ತಮ್ಮನನ್ನ ನೋಡಲು ದುಬೈಗೆ ಹೋಗಿ ಬರುತ್ತೇನೆ ಎಂದು ಕಥೆ ಕಟ್ಟಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು, ನಂತರ ಕಾಮುಕ ಮುದಾಸಿರ್ ನ ಪತ್ತೆಗೆ ಯುವತಿ ಮುಂದಾಗಿದ್ದಳು. ಮುದಾಸಿರ್ ಸಹೋದರನನ್ನ ಸಂಪರ್ಕಿಸಿದ್ದಾಗ, ಆತನ ತಾಯಿ ತೀರಿ ಹೋಗಿಲ್ಲ ತಾಯಿ ಕಾಶ್ಮೀರದಲ್ಲಿ ವಾಸ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಮುದಾಸಿರ್ ಬೆಂಗಳೂರಲ್ಲೇ ವಾಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿಯನ್ನ ಕಲೆ‌ ಹಾಕಿದ ಯುವತಿ, ಮನೆ ಬಳಿ ಹೋದಾಗ ಯುವತಿ ಗೊತ್ತಾಗಿದೆ, ಉದಾಸಿರ್ ಮದುವೆಯಾಗಿ ಹೆಂಡತಿ ಜೊತೆ ವಾಸವಿದ್ದನು ಎಂಬುದು. ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು, ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago