ಡೇಟಿಂಗ್ ಆ್ಯಪ್ ಬಳಕೆ ಮಾಡುತ್ತಿರುವ ಯುವತಿಯರೇ ಎಚ್ಚರ ಎಚ್ಚರ..! ಡೇಟಿಂಗ್ ಆ್ಯಪ್ ನಲ್ಲಿ ಆಕ್ಟಿವ್ ಆಗಿದ್ದಾರೆ ಕಾಮುಕರು: ಡೇಟಿಂಗ್ ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ

ಡೇಟಿಂಗ್ ಆ್ಯಪ್ ಯೂಸ್​ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ ಮಾಡುತ್ತಿದ್ದಾರೆ.

ಕಾಮುಕರ ಅಟ್ಟಹಾಸಕ್ಕೆ ಡೇಟಿಂಗ್ ಆ್ಯಪ್​ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ್ಯಪ್​ ಫ್ರೋಫೈಲ್ ನಲ್ಲಿ ಹೀರೋ ರೀತಿ ಫೋಟೊ ಅಪ್ಲೋಡ್ ಮಾಡಿ, ಹುಡುಗಿಯರ ಸ್ನೇಹ ಬೆಳೆಸಿ ಮದುವೆ ಆಗುವ ನಾಟಕವಾಡೋದು.

ಯುವತಿಯೊಬ್ಬಳು ಬಂಬಲ್ ಆ್ಯಪ್ ನಲ್ಲಿ ಸಂಗಾತಿಯನ್ನ ಹುಡುಕುತ್ತಿದ್ದಳು. ಈ ವೇಳೆ ಅನಿರುದ್ದ್ ಎಂಬಾತನ ಫ್ರೋಫೈಲ್ ನಿಂದ ಮೆಸೇಜ್​ ಯುವತಿಗೆ ಬಂದಿದೆ. ಅನಿರುದ್ದ್ ಚಾಟಿಂಗ್ ಮೂಲಕ ಯುವತಿಯ ಗಮನ ಸೆಳೆದಿದ್ದನು, ನಂತರ ಮುಖಾಮುಖಿ ಭೇಟಿಯಾದಾಗ ಯುವತಿ ಶಾಕ್ ಆಗಿದ್ದಾಳೆ. ಸ್ಥಳದಲ್ಲಿ ಅನಿರುದ್ಧ್ ನನ್ನು ನೋಡಿದಾಗ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಆತ ಅನಿರುದ್ದ್ ಅಲ್ಲ ಮುದಾಸಿರ್ ಎಂಬುದು ಗೊತ್ತಾಗಿದೆ. ಈ ವೇಳೆ ಆತ ನೀನು ನನ್ನನ್ನ ಪ್ರೀತಿಸುವುದಿಲ್ಲ ಅಂದುಕೊಂಡು ಈ ರೀತಿ ಮಾಡಿದ್ದೇನೆ ಎಂದು ಮನವೊಲಿಸಿದ್ದನು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.

ತನ್ನ ತಾಯಿಗೆ ಹುಷಾರಿಲ್ಲ ಎಂದು ಯುವತಿ ಬಳಿ 1 ಲಕ್ಷ ಹಣ ಪೀಕಿದ್ದ, ಹಣ ಕೊಟ್ಟ ಒಂದು ತಿಂಗಳ ನಂತ ತನ್ನ ತಾಯಿ ತೀರಿ ಹೋಗಿದ್ದಾಳೆ ಎಂದು ನಾಟಕ ಮಾಡಿದ್ದನು. ನಾನು ನನ್ನ ತಮ್ಮನನ್ನ ನೋಡಲು ದುಬೈಗೆ ಹೋಗಿ ಬರುತ್ತೇನೆ ಎಂದು ಕಥೆ ಕಟ್ಟಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು, ನಂತರ ಕಾಮುಕ ಮುದಾಸಿರ್ ನ ಪತ್ತೆಗೆ ಯುವತಿ ಮುಂದಾಗಿದ್ದಳು. ಮುದಾಸಿರ್ ಸಹೋದರನನ್ನ ಸಂಪರ್ಕಿಸಿದ್ದಾಗ, ಆತನ ತಾಯಿ ತೀರಿ ಹೋಗಿಲ್ಲ ತಾಯಿ ಕಾಶ್ಮೀರದಲ್ಲಿ ವಾಸ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಮುದಾಸಿರ್ ಬೆಂಗಳೂರಲ್ಲೇ ವಾಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿಯನ್ನ ಕಲೆ‌ ಹಾಕಿದ ಯುವತಿ, ಮನೆ ಬಳಿ ಹೋದಾಗ ಯುವತಿ ಗೊತ್ತಾಗಿದೆ, ಉದಾಸಿರ್ ಮದುವೆಯಾಗಿ ಹೆಂಡತಿ ಜೊತೆ ವಾಸವಿದ್ದನು ಎಂಬುದು. ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು, ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago