ಡೇಟಿಂಗ್ ಆ್ಯಪ್ ಯೂಸ್ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ ಮಾಡುತ್ತಿದ್ದಾರೆ.
ಕಾಮುಕರ ಅಟ್ಟಹಾಸಕ್ಕೆ ಡೇಟಿಂಗ್ ಆ್ಯಪ್ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ್ಯಪ್ ಫ್ರೋಫೈಲ್ ನಲ್ಲಿ ಹೀರೋ ರೀತಿ ಫೋಟೊ ಅಪ್ಲೋಡ್ ಮಾಡಿ, ಹುಡುಗಿಯರ ಸ್ನೇಹ ಬೆಳೆಸಿ ಮದುವೆ ಆಗುವ ನಾಟಕವಾಡೋದು.
ಯುವತಿಯೊಬ್ಬಳು ಬಂಬಲ್ ಆ್ಯಪ್ ನಲ್ಲಿ ಸಂಗಾತಿಯನ್ನ ಹುಡುಕುತ್ತಿದ್ದಳು. ಈ ವೇಳೆ ಅನಿರುದ್ದ್ ಎಂಬಾತನ ಫ್ರೋಫೈಲ್ ನಿಂದ ಮೆಸೇಜ್ ಯುವತಿಗೆ ಬಂದಿದೆ. ಅನಿರುದ್ದ್ ಚಾಟಿಂಗ್ ಮೂಲಕ ಯುವತಿಯ ಗಮನ ಸೆಳೆದಿದ್ದನು, ನಂತರ ಮುಖಾಮುಖಿ ಭೇಟಿಯಾದಾಗ ಯುವತಿ ಶಾಕ್ ಆಗಿದ್ದಾಳೆ. ಸ್ಥಳದಲ್ಲಿ ಅನಿರುದ್ಧ್ ನನ್ನು ನೋಡಿದಾಗ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಆತ ಅನಿರುದ್ದ್ ಅಲ್ಲ ಮುದಾಸಿರ್ ಎಂಬುದು ಗೊತ್ತಾಗಿದೆ. ಈ ವೇಳೆ ಆತ ನೀನು ನನ್ನನ್ನ ಪ್ರೀತಿಸುವುದಿಲ್ಲ ಅಂದುಕೊಂಡು ಈ ರೀತಿ ಮಾಡಿದ್ದೇನೆ ಎಂದು ಮನವೊಲಿಸಿದ್ದನು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು.
ತನ್ನ ತಾಯಿಗೆ ಹುಷಾರಿಲ್ಲ ಎಂದು ಯುವತಿ ಬಳಿ 1 ಲಕ್ಷ ಹಣ ಪೀಕಿದ್ದ, ಹಣ ಕೊಟ್ಟ ಒಂದು ತಿಂಗಳ ನಂತ ತನ್ನ ತಾಯಿ ತೀರಿ ಹೋಗಿದ್ದಾಳೆ ಎಂದು ನಾಟಕ ಮಾಡಿದ್ದನು. ನಾನು ನನ್ನ ತಮ್ಮನನ್ನ ನೋಡಲು ದುಬೈಗೆ ಹೋಗಿ ಬರುತ್ತೇನೆ ಎಂದು ಕಥೆ ಕಟ್ಟಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದನು, ನಂತರ ಕಾಮುಕ ಮುದಾಸಿರ್ ನ ಪತ್ತೆಗೆ ಯುವತಿ ಮುಂದಾಗಿದ್ದಳು. ಮುದಾಸಿರ್ ಸಹೋದರನನ್ನ ಸಂಪರ್ಕಿಸಿದ್ದಾಗ, ಆತನ ತಾಯಿ ತೀರಿ ಹೋಗಿಲ್ಲ ತಾಯಿ ಕಾಶ್ಮೀರದಲ್ಲಿ ವಾಸ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.
ಮುದಾಸಿರ್ ಬೆಂಗಳೂರಲ್ಲೇ ವಾಸ ಮಾಡಿಕೊಂಡಿದ್ದಾನೆ ಎಂಬ ಮಾಹಿತಿಯನ್ನ ಕಲೆ ಹಾಕಿದ ಯುವತಿ, ಮನೆ ಬಳಿ ಹೋದಾಗ ಯುವತಿ ಗೊತ್ತಾಗಿದೆ, ಉದಾಸಿರ್ ಮದುವೆಯಾಗಿ ಹೆಂಡತಿ ಜೊತೆ ವಾಸವಿದ್ದನು ಎಂಬುದು. ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು, ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…