Categories: ಕೋಲಾರ

ಡೇರಿಯಲ್ಲಿ ರಾಜಕೀಯ ಬೇಡ: ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್,

ಕೋಲಾರ: ಜಿಲ್ಲೆಯ ರೈತರ ಜೀವನಾಧಾರ ಹೈನುಗಾರಿಕೆಯಾಗಿದ್ದು ಈ ಸಂಸ್ಥೆಯನ್ನು ಉಳಿಸಿ ಬೆಳೆಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಸಹಕಾರ ಸಂಘಗಳಲ್ಲಿ ಯಾವುದೇ ರಾಜಕೀಯ ಮಾಡದೆ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ತಿಳಿಸಿದರು.

ತಾಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಜನತೆ ಹೈನುಗಾರಿಕೆಯಿಂದ ಆದಾಯ ಗಳಿಸುವ ಮೂಲವಾಗಿದೆ ಉತ್ಪಾದಕರ ಮತ್ತು ಡೇರಿ ಅಭಿವೃದ್ಧಿಗಾಗಿ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು ಮುಂದೆ ಒಕ್ಕೂಟದಲ್ಲಿ 10 ಲಕ್ಷ ಲೀಟರ್ ಹಾಲಿನ ಗುರಿ ಹೊಂದಿದ್ದು ಹಸು ಸಾಕಾಣಿಕೆ ಹೆಚ್ಚಾಗಬೇಕು ಇದಕ್ಕೆ ಪೂರಕವಾಗಿ ಒಕ್ಕೂಟದ ಜೊತೆಗೆ ಸಂಘದಿಂದ ಸಹಾಯ ನೀಡಲಾಗುತ್ತದೆ ಎಂದರು.

ಸಂಘದಲ್ಲಿ ಪ್ರತಿ ವರ್ಷ ಲಾಭಾಂಶ ಪಡೆಯುತ್ತಿದ್ದರೂ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಬಾಡಿಗೆಯಲ್ಲಿ ನಡೆಯುತ್ತಿದೆ ಈಗಾಗಲೇ ಸಂಘಕ್ಕೆ ಜಾಗಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು ಜಾಗ ಮಂಜೂರು ಮಾಡಿಸಲಾಗುತ್ತದೆ ಜೊತೆಗೆ ಹೊಸ ಕಟ್ಟಡ ಕಟ್ಟಲು ಸಹ ಒಕ್ಕೂಟ ಮತ್ತು ಕೆಎಂಎಫ್ ವತಿಯಿಂದ 10 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಜೊತೆಗೆ 1 ಲಕ್ಷ ಧರ್ಮಸ್ಥಳ ಸಂಘವು ನೀಡುತ್ತದೆ ಉಳಿದ ಹಣವನ್ನು ಕೊಡಿಸುವ ಕೆಲಸವನ್ನು ಮಾಡತ್ತೇನೆ ಎಂದು ಭರವಸೆ ನೀಡಿದರು ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು ಯಶಸ್ವಿನಿ ಕಾರ್ಡ್ ಮಾಡಿಸಿಕೊಂಡು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಹಾಲು ಉತ್ಪಾದಕರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಡೇರಿ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಈ ವರ್ಷವು 5.38 ಲಕ್ಷ ಲಾಭಾಂಶ ಬಂದಿದೆ ಕಳೆದ ವರ್ಷಕ್ಕಿಂತ ಈ ವರ್ಷ 1.53 ಲಕ್ಷ ಹೆಚ್ಚುವರಿ ಲಾಭಗಳಿದೆ ಇದಕ್ಕೆ ನಿರ್ದೇಶಕರು ಮತ್ತು ಹಾಲು ಉತ್ಪಾದಕರು ಮುತುವರ್ಜಿಯಿಂದ ಸಾಧ್ಯವಾಗಿದೆ ಜಾಗದ ಸಮಸ್ಯೆ ಇದ್ದು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿದ್ದು ಆದಷ್ಟು ಬೇಗ ಜಾಗ ಮಂಜೂರು ಮಾಡಲಿದ್ದು ಅ ಜಾಗದಲ್ಲಿ ಹೊಸ ಕಟ್ಟಡ ಕಟ್ಟಲು ಕ್ರಮ ವಹಿಸಲಾಗಿತ್ತು ಉತ್ಪಾದಕರ ಗುಣಮಟ್ಟದ ಹಾಲು ಪೂರೈಕೆ ಮಾಡಿ ಉತ್ತಮ ಲಾಭ ಗಳಿಸುವಂತೆ ತಿಳಿಸಿದರು.

ಈ ಕೋಮುಲ್ ವಿಸ್ತರಣಾಧಿಕಾರಿ ನಾಗೇಂದ್ರ, ಡೇರಿ ನಿರ್ದೇಶಕರಾದ ಟಿ.ಸಿ ಶ್ರೀನಿವಾಸ್, ಟಿ.ಕೆ ವೆಂಕಟೇಶ್, ಟಿ.ಕೆ ಮಂಜುನಾಥ್, ಮುನಿಶಾಮಪ್ಪ, ಟಿ.ಎನ್ ವೆಂಕಟೇಶ್, ಟಿ.ವಿ ನಾಗರಾಜ್, ವೆಂಕಟಪ್ಪ, ಅಮರಾವತಮ್ಮ, ಉಮಾ, ಕಾರ್ಯದರ್ಶಿ ಆನಂದ್, ಹಾಲು ಪರೀಕ್ಷಕ ವೆಂಕಟೇಶ್, ಸಹಾಯಕ ನಾರಾಯಣಸ್ವಾಮಿ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

8 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

10 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

20 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

24 hours ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago

ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನೂತನ ತಹಶೀಲ್ದಾರ್ ಮಲ್ಲಪ್ಪ

ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…

1 day ago