Categories: ಕೋಲಾರ

ಡೇರಿಯಲ್ಲಿ ರಾಜಕೀಯ ಬೇಡ: ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್,

ಕೋಲಾರ: ಜಿಲ್ಲೆಯ ರೈತರ ಜೀವನಾಧಾರ ಹೈನುಗಾರಿಕೆಯಾಗಿದ್ದು ಈ ಸಂಸ್ಥೆಯನ್ನು ಉಳಿಸಿ ಬೆಳೆಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಸಹಕಾರ ಸಂಘಗಳಲ್ಲಿ ಯಾವುದೇ ರಾಜಕೀಯ ಮಾಡದೆ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ತಿಳಿಸಿದರು.

ತಾಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಜನತೆ ಹೈನುಗಾರಿಕೆಯಿಂದ ಆದಾಯ ಗಳಿಸುವ ಮೂಲವಾಗಿದೆ ಉತ್ಪಾದಕರ ಮತ್ತು ಡೇರಿ ಅಭಿವೃದ್ಧಿಗಾಗಿ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು ಮುಂದೆ ಒಕ್ಕೂಟದಲ್ಲಿ 10 ಲಕ್ಷ ಲೀಟರ್ ಹಾಲಿನ ಗುರಿ ಹೊಂದಿದ್ದು ಹಸು ಸಾಕಾಣಿಕೆ ಹೆಚ್ಚಾಗಬೇಕು ಇದಕ್ಕೆ ಪೂರಕವಾಗಿ ಒಕ್ಕೂಟದ ಜೊತೆಗೆ ಸಂಘದಿಂದ ಸಹಾಯ ನೀಡಲಾಗುತ್ತದೆ ಎಂದರು.

ಸಂಘದಲ್ಲಿ ಪ್ರತಿ ವರ್ಷ ಲಾಭಾಂಶ ಪಡೆಯುತ್ತಿದ್ದರೂ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಬಾಡಿಗೆಯಲ್ಲಿ ನಡೆಯುತ್ತಿದೆ ಈಗಾಗಲೇ ಸಂಘಕ್ಕೆ ಜಾಗಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು ಜಾಗ ಮಂಜೂರು ಮಾಡಿಸಲಾಗುತ್ತದೆ ಜೊತೆಗೆ ಹೊಸ ಕಟ್ಟಡ ಕಟ್ಟಲು ಸಹ ಒಕ್ಕೂಟ ಮತ್ತು ಕೆಎಂಎಫ್ ವತಿಯಿಂದ 10 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಜೊತೆಗೆ 1 ಲಕ್ಷ ಧರ್ಮಸ್ಥಳ ಸಂಘವು ನೀಡುತ್ತದೆ ಉಳಿದ ಹಣವನ್ನು ಕೊಡಿಸುವ ಕೆಲಸವನ್ನು ಮಾಡತ್ತೇನೆ ಎಂದು ಭರವಸೆ ನೀಡಿದರು ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು ಯಶಸ್ವಿನಿ ಕಾರ್ಡ್ ಮಾಡಿಸಿಕೊಂಡು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಹಾಲು ಉತ್ಪಾದಕರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಡೇರಿ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಈ ವರ್ಷವು 5.38 ಲಕ್ಷ ಲಾಭಾಂಶ ಬಂದಿದೆ ಕಳೆದ ವರ್ಷಕ್ಕಿಂತ ಈ ವರ್ಷ 1.53 ಲಕ್ಷ ಹೆಚ್ಚುವರಿ ಲಾಭಗಳಿದೆ ಇದಕ್ಕೆ ನಿರ್ದೇಶಕರು ಮತ್ತು ಹಾಲು ಉತ್ಪಾದಕರು ಮುತುವರ್ಜಿಯಿಂದ ಸಾಧ್ಯವಾಗಿದೆ ಜಾಗದ ಸಮಸ್ಯೆ ಇದ್ದು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿದ್ದು ಆದಷ್ಟು ಬೇಗ ಜಾಗ ಮಂಜೂರು ಮಾಡಲಿದ್ದು ಅ ಜಾಗದಲ್ಲಿ ಹೊಸ ಕಟ್ಟಡ ಕಟ್ಟಲು ಕ್ರಮ ವಹಿಸಲಾಗಿತ್ತು ಉತ್ಪಾದಕರ ಗುಣಮಟ್ಟದ ಹಾಲು ಪೂರೈಕೆ ಮಾಡಿ ಉತ್ತಮ ಲಾಭ ಗಳಿಸುವಂತೆ ತಿಳಿಸಿದರು.

ಈ ಕೋಮುಲ್ ವಿಸ್ತರಣಾಧಿಕಾರಿ ನಾಗೇಂದ್ರ, ಡೇರಿ ನಿರ್ದೇಶಕರಾದ ಟಿ.ಸಿ ಶ್ರೀನಿವಾಸ್, ಟಿ.ಕೆ ವೆಂಕಟೇಶ್, ಟಿ.ಕೆ ಮಂಜುನಾಥ್, ಮುನಿಶಾಮಪ್ಪ, ಟಿ.ಎನ್ ವೆಂಕಟೇಶ್, ಟಿ.ವಿ ನಾಗರಾಜ್, ವೆಂಕಟಪ್ಪ, ಅಮರಾವತಮ್ಮ, ಉಮಾ, ಕಾರ್ಯದರ್ಶಿ ಆನಂದ್, ಹಾಲು ಪರೀಕ್ಷಕ ವೆಂಕಟೇಶ್, ಸಹಾಯಕ ನಾರಾಯಣಸ್ವಾಮಿ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

4 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago