Categories: ಕೋಲಾರ

ಡೇರಿಯಲ್ಲಿ ರಾಜಕೀಯ ಬೇಡ: ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್,

ಕೋಲಾರ: ಜಿಲ್ಲೆಯ ರೈತರ ಜೀವನಾಧಾರ ಹೈನುಗಾರಿಕೆಯಾಗಿದ್ದು ಈ ಸಂಸ್ಥೆಯನ್ನು ಉಳಿಸಿ ಬೆಳೆಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಸಹಕಾರ ಸಂಘಗಳಲ್ಲಿ ಯಾವುದೇ ರಾಜಕೀಯ ಮಾಡದೆ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ತಿಳಿಸಿದರು.

ತಾಲೂಕಿನ ತುರಾಂಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಜನತೆ ಹೈನುಗಾರಿಕೆಯಿಂದ ಆದಾಯ ಗಳಿಸುವ ಮೂಲವಾಗಿದೆ ಉತ್ಪಾದಕರ ಮತ್ತು ಡೇರಿ ಅಭಿವೃದ್ಧಿಗಾಗಿ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು ಮುಂದೆ ಒಕ್ಕೂಟದಲ್ಲಿ 10 ಲಕ್ಷ ಲೀಟರ್ ಹಾಲಿನ ಗುರಿ ಹೊಂದಿದ್ದು ಹಸು ಸಾಕಾಣಿಕೆ ಹೆಚ್ಚಾಗಬೇಕು ಇದಕ್ಕೆ ಪೂರಕವಾಗಿ ಒಕ್ಕೂಟದ ಜೊತೆಗೆ ಸಂಘದಿಂದ ಸಹಾಯ ನೀಡಲಾಗುತ್ತದೆ ಎಂದರು.

ಸಂಘದಲ್ಲಿ ಪ್ರತಿ ವರ್ಷ ಲಾಭಾಂಶ ಪಡೆಯುತ್ತಿದ್ದರೂ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಬಾಡಿಗೆಯಲ್ಲಿ ನಡೆಯುತ್ತಿದೆ ಈಗಾಗಲೇ ಸಂಘಕ್ಕೆ ಜಾಗಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು ಜಾಗ ಮಂಜೂರು ಮಾಡಿಸಲಾಗುತ್ತದೆ ಜೊತೆಗೆ ಹೊಸ ಕಟ್ಟಡ ಕಟ್ಟಲು ಸಹ ಒಕ್ಕೂಟ ಮತ್ತು ಕೆಎಂಎಫ್ ವತಿಯಿಂದ 10 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಜೊತೆಗೆ 1 ಲಕ್ಷ ಧರ್ಮಸ್ಥಳ ಸಂಘವು ನೀಡುತ್ತದೆ ಉಳಿದ ಹಣವನ್ನು ಕೊಡಿಸುವ ಕೆಲಸವನ್ನು ಮಾಡತ್ತೇನೆ ಎಂದು ಭರವಸೆ ನೀಡಿದರು ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು ಯಶಸ್ವಿನಿ ಕಾರ್ಡ್ ಮಾಡಿಸಿಕೊಂಡು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಹಾಲು ಉತ್ಪಾದಕರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಡೇರಿ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಈ ವರ್ಷವು 5.38 ಲಕ್ಷ ಲಾಭಾಂಶ ಬಂದಿದೆ ಕಳೆದ ವರ್ಷಕ್ಕಿಂತ ಈ ವರ್ಷ 1.53 ಲಕ್ಷ ಹೆಚ್ಚುವರಿ ಲಾಭಗಳಿದೆ ಇದಕ್ಕೆ ನಿರ್ದೇಶಕರು ಮತ್ತು ಹಾಲು ಉತ್ಪಾದಕರು ಮುತುವರ್ಜಿಯಿಂದ ಸಾಧ್ಯವಾಗಿದೆ ಜಾಗದ ಸಮಸ್ಯೆ ಇದ್ದು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿದ್ದು ಆದಷ್ಟು ಬೇಗ ಜಾಗ ಮಂಜೂರು ಮಾಡಲಿದ್ದು ಅ ಜಾಗದಲ್ಲಿ ಹೊಸ ಕಟ್ಟಡ ಕಟ್ಟಲು ಕ್ರಮ ವಹಿಸಲಾಗಿತ್ತು ಉತ್ಪಾದಕರ ಗುಣಮಟ್ಟದ ಹಾಲು ಪೂರೈಕೆ ಮಾಡಿ ಉತ್ತಮ ಲಾಭ ಗಳಿಸುವಂತೆ ತಿಳಿಸಿದರು.

ಈ ಕೋಮುಲ್ ವಿಸ್ತರಣಾಧಿಕಾರಿ ನಾಗೇಂದ್ರ, ಡೇರಿ ನಿರ್ದೇಶಕರಾದ ಟಿ.ಸಿ ಶ್ರೀನಿವಾಸ್, ಟಿ.ಕೆ ವೆಂಕಟೇಶ್, ಟಿ.ಕೆ ಮಂಜುನಾಥ್, ಮುನಿಶಾಮಪ್ಪ, ಟಿ.ಎನ್ ವೆಂಕಟೇಶ್, ಟಿ.ವಿ ನಾಗರಾಜ್, ವೆಂಕಟಪ್ಪ, ಅಮರಾವತಮ್ಮ, ಉಮಾ, ಕಾರ್ಯದರ್ಶಿ ಆನಂದ್, ಹಾಲು ಪರೀಕ್ಷಕ ವೆಂಕಟೇಶ್, ಸಹಾಯಕ ನಾರಾಯಣಸ್ವಾಮಿ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 hour ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

23 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago