Categories: ಮೈಸೂರು

“ಡೇ ಕೇರ್ ಕಿಮೋಥೇರಪಿ” ಕೇಂದ್ರ ಉದ್ಘಾಟನೆ

ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ.
2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದೇವೆ ಎಂದರು.

240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ನೆರವು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ ಎಂದರು.

ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಈ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದು ಗಮನಿಸಿದ್ದೆ. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು ಎಂದರು.

ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು. ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ. ನಾನೂ ಕೂಡ 25 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದೆ. ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂಬ ಭರವಸೆಯಿದೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳಬಾರದು ಎಂದು ಹೇಳಿದರು.

ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂಬುದು ನನ್ನ ಸಲಹೆ ಎಂದು ತಿಳಿಸಿದರು.

Ramesh Babu

Journalist

Recent Posts

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

5 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

6 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

11 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

12 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

21 hours ago