Categories: ಮೈಸೂರು

“ಡೇ ಕೇರ್ ಕಿಮೋಥೇರಪಿ” ಕೇಂದ್ರ ಉದ್ಘಾಟನೆ

ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ.
2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದೇವೆ ಎಂದರು.

240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ನೆರವು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ ಎಂದರು.

ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಈ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದು ಗಮನಿಸಿದ್ದೆ. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು ಎಂದರು.

ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು. ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ. ನಾನೂ ಕೂಡ 25 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದೆ. ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂಬ ಭರವಸೆಯಿದೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳಬಾರದು ಎಂದು ಹೇಳಿದರು.

ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂಬುದು ನನ್ನ ಸಲಹೆ ಎಂದು ತಿಳಿಸಿದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

13 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

22 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago