Categories: ಮೈಸೂರು

“ಡೇ ಕೇರ್ ಕಿಮೋಥೇರಪಿ” ಕೇಂದ್ರ ಉದ್ಘಾಟನೆ

ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ.
2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದೇವೆ ಎಂದರು.

240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ನೆರವು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ ಎಂದರು.

ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಈ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದು ಗಮನಿಸಿದ್ದೆ. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು ಎಂದರು.

ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು. ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ. ನಾನೂ ಕೂಡ 25 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದೆ. ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂಬ ಭರವಸೆಯಿದೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳಬಾರದು ಎಂದು ಹೇಳಿದರು.

ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂಬುದು ನನ್ನ ಸಲಹೆ ಎಂದು ತಿಳಿಸಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

9 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

11 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago