Categories: ಮೈಸೂರು

“ಡೇ ಕೇರ್ ಕಿಮೋಥೇರಪಿ” ಕೇಂದ್ರ ಉದ್ಘಾಟನೆ

ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ.
2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದೇವೆ ಎಂದರು.

240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ನೆರವು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ ಎಂದರು.

ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಈ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದು ಗಮನಿಸಿದ್ದೆ. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು ಎಂದರು.

ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು. ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ. ನಾನೂ ಕೂಡ 25 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದೆ. ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂಬ ಭರವಸೆಯಿದೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳಬಾರದು ಎಂದು ಹೇಳಿದರು.

ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂಬುದು ನನ್ನ ಸಲಹೆ ಎಂದು ತಿಳಿಸಿದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

5 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

6 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

7 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

11 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago