“ಡ್ರಗ್ಸ್ ಮುಕ್ತ ಕರ್ನಾಟಕ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ 5 ಕಿ.ಮೀ ಮ್ಯಾರಥಾನ್ ಅನ್ನು ಮಾ.9ರ ಭಾನುವಾರದಂದು ಆಯೋಜನೆ ಮಾಡಲಾಗಿದೆ.
ಈ ಮ್ಯಾರಥಾನ್ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಮಾ.9ರ ಬೆಳಗ್ಗೆ 6:30ಕ್ಕೆ ಪ್ರಾರಂಭಗೊಂಡು ಇಟ್ಕಲ್ ಪುರ ಗ್ರಾಮದ ಸರ್ಕಾರಿ ಶಾಲೆ, ಆಂಜನೇಯ ಸ್ಟ್ಯಾಚು ನಂತರ ನೆಲಮಂಗಲ ಮುಖ್ಯ ರಸ್ತೆಯಲ್ಲಿ ಬಂದು ಪ್ರೆಸಿಡೆನ್ಸಿ ಕಾಲೇಜಿನ ಬಳಿ ಮುಕ್ತಾಯಗೊಳ್ಳಲಿದೆ.
ಮ್ಯಾರಥಾನ್ ನಲ್ಲಿ ನಟ ಧೃವ ಸರ್ಜಾ, ಶ್ರೀಮುರಳಿ, ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ನಟಿ ಸ್ಪೂರ್ತಿ ಉಡಿಮನೆ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ, ಎಲ್ಲರೂ ಒಂದಾಗಿ ಡ್ರಗ್ಸ್ ಮುಕ್ತ ಮತ್ತು ಸೈಬರ್ ಅಪರಾಧ ಕುರಿತ ಜಾಗೃತಿ ಮೂಡಿಸೋಣ. ನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಮ್ಯಾರಥಾನ್ ನಲ್ಲಿ ಭಾಗವಹಿಸಿ ಅಭಿಯಾನವನ್ನ ಯಶಸ್ವಿಗೊಳಿಸಿ ಎಂದು ಪೊಲೀಸ್ ಇಲಾಖೆ ಕೋರಿದೆ.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…