“ಡ್ರಗ್ಸ್ ಮುಕ್ತ ಕರ್ನಾಟಕ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ 5k ಮ್ಯಾರಥಾನ್ ಅನ್ನು ಭಾನುವಾರ ಆಯೋಜನೆ ಮಾಡಲಾಗಿತ್ತು.
ಡ್ರಗ್ಸ್ ಮುಕ್ತ ಮತ್ತು ಸೈಬರ್ ಅಪರಾಧ ಕುರಿತ ಜಾಗೃತಿ ಮೂಡಿಸುವ ಮ್ಯಾರಥಾನ್ ಗೆ ನಟ ಧೃವ ಸರ್ಜಾ ಚಾಲನೆ ನೀಡಿದರು.
ಈ ಮ್ಯಾರಥಾನ್ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಬೆಳಗ್ಗೆ 6:30ಕ್ಕೆ ಪ್ರಾರಂಭಗೊಂಡು ಇಟ್ಕಲ್ ಪುರ ಗ್ರಾಮದ ಸರ್ಕಾರಿ ಶಾಲೆ, ಆಂಜನೇಯ ಸ್ಟ್ಯಾಚು ನಂತರ ನೆಲಮಂಗಲ ಮುಖ್ಯ ರಸ್ತೆಯಲ್ಲಿ ಬಂದು ಪ್ರೆಸಿಡೆನ್ಸಿ ಕಾಲೇಜಿನ ಬಳಿ ಮುಕ್ತಾಯಗೊಂಡಿತು.
ಮ್ಯಾರಥಾನ್ ನಲ್ಲಿ ಶ್ರೀಮುರಳಿ, ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ನಟಿ ಸ್ಪೂರ್ತಿ ಉಡಿಮನೆ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್ ಕುಮಾರ್. ಕೆ, ಕೆ.ಎಸ್.ನಾಗರಾಜ್, ವಿವಿಧ ಠಾಣೆಗಳ ಇನ್ಸ್ಪೆಕ್ಟರ್ ಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಇತರರು ಭಾಗವಹಿಸಿದ್ದರು.
ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ…
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…