“ಡ್ರಗ್ಸ್ ಮುಕ್ತ ಕರ್ನಾಟಕ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ 5k ಮ್ಯಾರಥಾನ್ ಅನ್ನು ಭಾನುವಾರ ಆಯೋಜನೆ ಮಾಡಲಾಗಿತ್ತು.
ಡ್ರಗ್ಸ್ ಮುಕ್ತ ಮತ್ತು ಸೈಬರ್ ಅಪರಾಧ ಕುರಿತ ಜಾಗೃತಿ ಮೂಡಿಸುವ ಮ್ಯಾರಥಾನ್ ಗೆ ನಟ ಧೃವ ಸರ್ಜಾ ಚಾಲನೆ ನೀಡಿದರು.
ಈ ಮ್ಯಾರಥಾನ್ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಬೆಳಗ್ಗೆ 6:30ಕ್ಕೆ ಪ್ರಾರಂಭಗೊಂಡು ಇಟ್ಕಲ್ ಪುರ ಗ್ರಾಮದ ಸರ್ಕಾರಿ ಶಾಲೆ, ಆಂಜನೇಯ ಸ್ಟ್ಯಾಚು ನಂತರ ನೆಲಮಂಗಲ ಮುಖ್ಯ ರಸ್ತೆಯಲ್ಲಿ ಬಂದು ಪ್ರೆಸಿಡೆನ್ಸಿ ಕಾಲೇಜಿನ ಬಳಿ ಮುಕ್ತಾಯಗೊಂಡಿತು.
ಮ್ಯಾರಥಾನ್ ನಲ್ಲಿ ಶ್ರೀಮುರಳಿ, ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ನಟಿ ಸ್ಪೂರ್ತಿ ಉಡಿಮನೆ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್ ಕುಮಾರ್. ಕೆ, ಕೆ.ಎಸ್.ನಾಗರಾಜ್, ವಿವಿಧ ಠಾಣೆಗಳ ಇನ್ಸ್ಪೆಕ್ಟರ್ ಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಇತರರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…