“ಡ್ರಗ್ ಮುಕ್ತ ಕರ್ನಾಟಕ” ಅಭಿಯಾನ: ಕರ್ನಾಟಕ ರಾಜ್ಯ ಪೊಲೀಸ್ ಓಟಕ್ಕೆ ಎಸ್ಪಿ ಚಂದ್ರಕಾಂತ್ ಚಾಲನೆ

ಪ್ರತಿ ವರ್ಷದಂತೆ 2026ನೇ ಸಾಲಿನಲ್ಲಿಯೂ ಸಹ ಬೆಂಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ “ಡ್ರಗ್ ಮುಕ್ತ ಕರ್ನಾಟಕ” ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಓಟ 2026ರ 3ನೇ ಆವೃತ್ತಿಯ 5ಕೆ ಮತ್ತು 10ಕೆ ಓಟದ ಕಾರ್ಯಕ್ರಮವನ್ನು ಮಾ.1 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಅದರಂತೆಯೇ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನದ ಕರ್ನಾಟಕ ರಾಜ್ಯ ಪೊಲೀಸ್ ಓಟಕ್ಕೆ ದೊಡ್ಡಬಳ್ಳಾಪುರ ಟೌನಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್‌)ದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಅವರು ಚಾಲನೆ ನೀಡಿದರು… ಈ ಓಟ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಕೊಂಗಾಡಿಯಪ್ಪ ಕಾಲೇಜು ಮೈದಾನದಲ್ಲಿ ಮುಕ್ತಾಯಗೊಂಡಿತು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರುಗಳು ಹಾಗೂ ಪೊಲೀಸ್ ಉಪಾಧೀಕ್ಷಕರುಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸುವವರಿದ್ದರು. ಈ ಕಾರ್ಯಕ್ರಮದಲ್ಲಿ ಸಮಸ್ತ ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಿ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನಕ್ಕೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago