ಪ್ರತಿ ವರ್ಷದಂತೆ 2026ನೇ ಸಾಲಿನಲ್ಲಿಯೂ ಸಹ ಬೆಂಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ “ಡ್ರಗ್ ಮುಕ್ತ ಕರ್ನಾಟಕ” ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಓಟ 2026ರ 3ನೇ ಆವೃತ್ತಿಯ 5ಕೆ ಮತ್ತು 10ಕೆ ಓಟದ ಕಾರ್ಯಕ್ರಮವನ್ನು ಮಾ.1 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಅದರಂತೆಯೇ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನದ ಕರ್ನಾಟಕ ರಾಜ್ಯ ಪೊಲೀಸ್ ಓಟಕ್ಕೆ ದೊಡ್ಡಬಳ್ಳಾಪುರ ಟೌನಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್)ದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಅವರು ಚಾಲನೆ ನೀಡಿದರು… ಈ ಓಟ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಕೊಂಗಾಡಿಯಪ್ಪ ಕಾಲೇಜು ಮೈದಾನದಲ್ಲಿ ಮುಕ್ತಾಯಗೊಂಡಿತು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರುಗಳು ಹಾಗೂ ಪೊಲೀಸ್ ಉಪಾಧೀಕ್ಷಕರುಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸುವವರಿದ್ದರು. ಈ ಕಾರ್ಯಕ್ರಮದಲ್ಲಿ ಸಮಸ್ತ ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಿ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನಕ್ಕೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…