ಪ್ರತಿ ವರ್ಷದಂತೆ 2026ನೇ ಸಾಲಿನಲ್ಲಿಯೂ ಸಹ ಬೆಂಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ “ಡ್ರಗ್ ಮುಕ್ತ ಕರ್ನಾಟಕ” ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಓಟ 2026ರ 3ನೇ ಆವೃತ್ತಿಯ 5ಕೆ ಮತ್ತು 10ಕೆ ಓಟದ ಕಾರ್ಯಕ್ರಮವನ್ನು ಮಾ.1 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಅದರಂತೆಯೇ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನದ ಕರ್ನಾಟಕ ರಾಜ್ಯ ಪೊಲೀಸ್ ಓಟಕ್ಕೆ ದೊಡ್ಡಬಳ್ಳಾಪುರ ಟೌನಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್)ದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಅವರು ಚಾಲನೆ ನೀಡಿದರು… ಈ ಓಟ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಕೊಂಗಾಡಿಯಪ್ಪ ಕಾಲೇಜು ಮೈದಾನದಲ್ಲಿ ಮುಕ್ತಾಯಗೊಂಡಿತು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರುಗಳು ಹಾಗೂ ಪೊಲೀಸ್ ಉಪಾಧೀಕ್ಷಕರುಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸುವವರಿದ್ದರು. ಈ ಕಾರ್ಯಕ್ರಮದಲ್ಲಿ ಸಮಸ್ತ ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಿ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನಕ್ಕೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…