“ಡ್ರಗ್ ಮುಕ್ತ ಕರ್ನಾಟಕ” ಅಭಿಯಾನ: ಕರ್ನಾಟಕ ರಾಜ್ಯ ಪೊಲೀಸ್ ಓಟಕ್ಕೆ ಎಸ್ಪಿ ಚಂದ್ರಕಾಂತ್ ಚಾಲನೆ

ಪ್ರತಿ ವರ್ಷದಂತೆ 2026ನೇ ಸಾಲಿನಲ್ಲಿಯೂ ಸಹ ಬೆಂಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ “ಡ್ರಗ್ ಮುಕ್ತ ಕರ್ನಾಟಕ” ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಓಟ 2026ರ 3ನೇ ಆವೃತ್ತಿಯ 5ಕೆ ಮತ್ತು 10ಕೆ ಓಟದ ಕಾರ್ಯಕ್ರಮವನ್ನು ಮಾ.1 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಅದರಂತೆಯೇ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನದ ಕರ್ನಾಟಕ ರಾಜ್ಯ ಪೊಲೀಸ್ ಓಟಕ್ಕೆ ದೊಡ್ಡಬಳ್ಳಾಪುರ ಟೌನಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್‌)ದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಅವರು ಚಾಲನೆ ನೀಡಿದರು… ಈ ಓಟ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಕೊಂಗಾಡಿಯಪ್ಪ ಕಾಲೇಜು ಮೈದಾನದಲ್ಲಿ ಮುಕ್ತಾಯಗೊಂಡಿತು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರುಗಳು ಹಾಗೂ ಪೊಲೀಸ್ ಉಪಾಧೀಕ್ಷಕರುಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸುವವರಿದ್ದರು. ಈ ಕಾರ್ಯಕ್ರಮದಲ್ಲಿ ಸಮಸ್ತ ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಿ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನಕ್ಕೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

4 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

5 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

12 hours ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

14 hours ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

1 day ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

1 day ago