ದೊಡ್ಡಬಳ್ಳಾಪುರ: ದಿನೇ ದಿನೇ ತನ್ನ ಎಲ್ಲೆ ವಿಸ್ತರಿಸಿಕೊಂಡು ರಾಜ್ಯ ರಾಜಧಾನಿಗೆ ದೊಡ್ಡಬಳ್ಳಾಪುರ ನಗರ ಹತ್ತಿರವಾಗುತ್ತಿದೆ. ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶ, ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು, ಪ್ರವಾಸಿ ತಾಣಗಳಿಂದಾಗಿ ಲಕ್ಷಾಂತರ ಜನರನ್ನು ಈ ನಗರವು ಆಕರ್ಷಿಸುತ್ತಿದೆ.
ದೀಪದ ಬುಡದಲ್ಲಿ ಕತ್ತಲು ಎಂಬಂತೆ ರಾಜಧಾನಿಗೆ ಕೂಗಳತೆ ದೂರದಲ್ಲೇ ಇದ್ದರೂ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಸೊರಗುತ್ತಿದೆ.
ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ, ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದರೂ ನಗರ ಭಾಗದಲ್ಲಿ ಎಲ್ಲಿಯೂ ಪ್ರಯಾಣಿಕರಿಗೆ ತಂಗುದಾಣ ಇಲ್ಲದಂತಾಗಿದೆ.
ರೈಲ್ವೆ ನಿಲ್ದಾಣ, ಟಿ.ಬಿ.ವೃತ್ತದ ಚಿಕ್ಕಬಳ್ಳಾಪುರ ಮಾರ್ಗದಲ್ಲಿ ತಂಗುದಾಣ ಇದ್ದರೂ ಪ್ರಯಾಣಿಕರು ಬಳಸುವಂತೆ ಇಲ್ಲ.
ಬಸ್ಸಿಗಾಗಿ ಕಾಯುವ ಪ್ರಯಾಣಿಕರಲ್ಲಿ ಅಂಗವಿಕಲರು, ಮಕ್ಕಳು, ವೃದ್ಧರು, ಮಹಿಳೆಯರು, ರೋಗಿಗಳು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಬಿಸಿಲಲ್ಲೇ ನಿಲ್ಲಬೇಕಾಗಿದೆ.
ನಗರದಲ್ಲಿ ತಂಗುದಾಣ ಇಲ್ಲದೇ ಇರುವ ಕಾರಣ ಕೆಲ ಬಸ್ ಗಳು ನಿಲುಗಡೆ ಮಾಡದೇ ಹೋರಟು ಹೋಗುತ್ತವೆ. ಆಗ ಬಸ್ಸಿಗಾಗಿ ಗಂಟೆಗಟ್ಟಲೇ ಕಾದು ಕುಳಿತ ಪ್ರಯಾಣಿಕರು ಮತ್ತೆ ರಸ್ತೆಯಲ್ಲೇ ಇನ್ನಷ್ಟು ಸಮಯ ಕಳೆಯಬೇಕಾದ ದುಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರಯಾಣಿಕರು ರಸ್ತೆಯಲ್ಲೇ ಬಸ್ಸಿಗೆ ನಿಲ್ಲುತ್ತಿರುವುದರಿಂದ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತಿವೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…