ದೊಡ್ಡಬಳ್ಳಾಪುರ: ದಿನೇ ದಿನೇ ತನ್ನ ಎಲ್ಲೆ ವಿಸ್ತರಿಸಿಕೊಂಡು ರಾಜ್ಯ ರಾಜಧಾನಿಗೆ ದೊಡ್ಡಬಳ್ಳಾಪುರ ನಗರ ಹತ್ತಿರವಾಗುತ್ತಿದೆ. ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶ, ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು, ಪ್ರವಾಸಿ ತಾಣಗಳಿಂದಾಗಿ ಲಕ್ಷಾಂತರ ಜನರನ್ನು ಈ ನಗರವು ಆಕರ್ಷಿಸುತ್ತಿದೆ.
ದೀಪದ ಬುಡದಲ್ಲಿ ಕತ್ತಲು ಎಂಬಂತೆ ರಾಜಧಾನಿಗೆ ಕೂಗಳತೆ ದೂರದಲ್ಲೇ ಇದ್ದರೂ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಸೊರಗುತ್ತಿದೆ.
ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ, ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದರೂ ನಗರ ಭಾಗದಲ್ಲಿ ಎಲ್ಲಿಯೂ ಪ್ರಯಾಣಿಕರಿಗೆ ತಂಗುದಾಣ ಇಲ್ಲದಂತಾಗಿದೆ.
ರೈಲ್ವೆ ನಿಲ್ದಾಣ, ಟಿ.ಬಿ.ವೃತ್ತದ ಚಿಕ್ಕಬಳ್ಳಾಪುರ ಮಾರ್ಗದಲ್ಲಿ ತಂಗುದಾಣ ಇದ್ದರೂ ಪ್ರಯಾಣಿಕರು ಬಳಸುವಂತೆ ಇಲ್ಲ.
ಬಸ್ಸಿಗಾಗಿ ಕಾಯುವ ಪ್ರಯಾಣಿಕರಲ್ಲಿ ಅಂಗವಿಕಲರು, ಮಕ್ಕಳು, ವೃದ್ಧರು, ಮಹಿಳೆಯರು, ರೋಗಿಗಳು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಬಿಸಿಲಲ್ಲೇ ನಿಲ್ಲಬೇಕಾಗಿದೆ.
ನಗರದಲ್ಲಿ ತಂಗುದಾಣ ಇಲ್ಲದೇ ಇರುವ ಕಾರಣ ಕೆಲ ಬಸ್ ಗಳು ನಿಲುಗಡೆ ಮಾಡದೇ ಹೋರಟು ಹೋಗುತ್ತವೆ. ಆಗ ಬಸ್ಸಿಗಾಗಿ ಗಂಟೆಗಟ್ಟಲೇ ಕಾದು ಕುಳಿತ ಪ್ರಯಾಣಿಕರು ಮತ್ತೆ ರಸ್ತೆಯಲ್ಲೇ ಇನ್ನಷ್ಟು ಸಮಯ ಕಳೆಯಬೇಕಾದ ದುಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರಯಾಣಿಕರು ರಸ್ತೆಯಲ್ಲೇ ಬಸ್ಸಿಗೆ ನಿಲ್ಲುತ್ತಿರುವುದರಿಂದ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತಿವೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…