ತಂತಿ ಬೇಲಿ ಕೆಡವಿ ಬಡ ರೈತ ಜಮೀನು ಕಬಳಿಸುವ ಸಂಚು ಆರೋಪ; ಸುಳ್ಳು ಆರೋಪ ಎಂದು ತಳ್ಳಿ ಹಾಕಿದ ಮುನೇಗೌಡ

 

ಏಕಾಎಕಿ ಜಮೀನಿಗೆ ನುಗ್ಗಿದ ಪುಂಡರ ಗ್ಯಾಂಗ್, ತಂತಿ ಬೇಲಿ ಕೆಡವಿ ಜಮೀನು ಅತಿಕ್ರಮ ಪ್ರವೇಶ ಮಾಡಿದ್ದಾರೆ, ಸ್ಥಳಕ್ಕೆ ಅಧಿಕಾರಿಗಳ ಕರೆಯದೆ, ತೆರವು ಕಾರ್ಯಾಚರಣೆಯ ನಡೆಸಿದ್ದಾರೆಂಬ ಆರೋಪವನ್ನ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಮಾಡಲಾಗಿತ್ತು. ಆದರೆ ಆರೋಪವನ್ನ ನಿರಕರಿಸಿರುವ ರಿಯಲ್ ಎಸ್ಟೇಟ್ ಉದ್ಯಮಿ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸುಳ್ಳು ಆರೋಪ ಮಾಡುತ್ತಿರುವುದ್ದಾಗಿ ಹೇಳಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಟಿ.ಹೊಸಹಳ್ಳಿ ನಿವಾಸಿ ಆಂಜಿನಪ್ಪನವರ 2 ಎಕರೆ 12 ಗುಂಟೆ ಕಬಳಿಸುವ ಸಂಚನ್ನ ಭೂಗಳ್ಳರು ನಡೆಸಿದ್ದಾರೆ, ಆಂಜಿನಪ್ಪನವರ ತಂದೆ ರಾಮಯ್ಯನವರಿಗೆ ಕಾರಾನಾಳ ಸರ್ವೆ ನಂಬರ್ 168 ರಲ್ಲಿ ಸರ್ಕಾರದಿಂದ 2 ಎಕರೆ 12 ಗುಂಟೆ ಜಮೀನು ಮಂಜೂರಾಗಿತ್ತು.

ತಂದೆಯ ನಿಧನ ನಂತರ ಈ ಜಮೀನು ಆಂಜಿನಪ್ಪನವರಿಗೆ ಪೌವತಿ ಖಾತೆ ಆಗಿದೆ, ಇವರ ಜಮೀನು ಪಕ್ಕದಲ್ಲಿ ಸರ್ವೇ ನಂಬರ್ 169 ರಲ್ಲಿ ಗುಣ ಶೇಖರ್ ರವರಿಗೆ ಸೇರಿದ 1 ಎಕರೆ 6 ಗುಂಟೆ ಜಮೀನು ಇದ್ದು, ಜಮೀನಿನ ಉಳಿದ ಭಾಗ ಆಂಜಿನಪ್ಪ ಜಮೀನಿನಲ್ಲಿದೆ ಎಂದು ಸುಳ್ಳು ಆರೋಪ ಮಾಡುವ ರಿಯಲ್ ಎಸ್ಟೇಟ್ ಉದ್ಯಮಿ ಉದ್ಯಮಿಯೊಬ್ಬ ಮಧ್ಯ ಪ್ರವೇಶ ಮಾಡಿ ಕಿರುಕುಳ ಕೊಡುತ್ತಿದ್ದಾರೆ, ಜಮೀನು ಒತ್ತುವರಿ ತೆರವು ಮಾಡಬೇಕಾದರೆ ಸ್ಥಳದಲ್ಲಿ ಸರ್ಕಾರಿ ಅಧಿಕಾರಿಗಳು ಇರಬೇಕು, ಪೊಲೀಸ್ ಬಂದೋಬಸ್ತ್ ಇರಬೇಕು ಮತ್ತು ಜಮೀನು ಒತ್ತುವರಿ ತೆರವು ಮಾಡುವ ಬಗ್ಗೆ ರೈತನಿಗೆ ನೋಟಿಸ್ ನೀಡಬೇಕು, ಆದರೆ ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿದ ರಿಯಲ್ ಎಸ್ಟೇಟ್ ಉದ್ಯಮಿ ತಂಡ ಏಕಾಏಕಿ ಬಂದು ತಂತಿ ಬೇಲಿ ಕೆಡವಿ ಜಮೀನು ಕಬಳಿಸುವ ಸಂಚು ನಡೆಸಿದ್ದಾರೆ ಎಂದು ಆಂಜಿನಪ್ಪ ಕುಟುಂಬ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಮಧು ಮತ್ತು ಆಂಜಿನಪ್ಪ ಮಾಡುತ್ತಿರುವ ಆರೋಪವನ್ನ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಮುನೇಗೌಡ ಸಾರಾ‌ಸಗಟಾಗಿ ತಳ್ಳಿಹಾಕಿದ್ದಾರೆ, 2015ರಲ್ಲೇ ನಾನು ಸರ್ವೆ ನಂಬರ್ 169ರ ಒಂದು ಎಕರೆ ಜಮೀನನ್ನು ಯಶೋಧಮ್ಮನವರಿಗೆ ಮಾರಿದ್ದೇನೆ, ಗುಂಡಾಗಳನ್ನು ಬಿಟ್ಟು ಒತ್ತುವರಿ ತೆರವು ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಿ, ಅಕ್ಕನ ಗಂಡನೇ ಆಗಬೇಕಿದ್ದ ಆಂಜಿನಪ್ಪ, ಅಕ್ಕನ ಮಗಳ ಮದುವೆಗಾಗಿ 10 ಲಕ್ಷ ಮಗನ ಮದುವೆ 5 ಲಕ್ಷ ಹಣ ಕೊಟ್ಟಿದೆ. ಹಣ ವಾಪಸ್ ಕೇಳಿದಕ್ಕೆ ವಿನಾ ಕಾರಣ ನನ್ನ ವಿರುದ್ದ ಆರೋಪ ಮಾಡುತ್ತಿದ್ದಾರೆ, ಮುಂದೆಯೂ ಇದೇ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಆಂಜಿನಪ್ಪ ಮತ್ತು ಆತನ ಮಗನ ವಿರುದ್ಧ ಕಾನೂನು ಕ್ರಮ ತೆಗೆದು ಕೊಳ್ಳುವ ಎಚ್ಚರಿಕೆಯನ್ನ ನೀಡಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

12 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

19 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

20 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago