ಏಕಾಎಕಿ ಜಮೀನಿಗೆ ನುಗ್ಗಿದ ಪುಂಡರ ಗ್ಯಾಂಗ್, ತಂತಿ ಬೇಲಿ ಕೆಡವಿ ಜಮೀನು ಅತಿಕ್ರಮ ಪ್ರವೇಶ ಮಾಡಿದ್ದಾರೆ, ಸ್ಥಳಕ್ಕೆ ಅಧಿಕಾರಿಗಳ ಕರೆಯದೆ, ತೆರವು ಕಾರ್ಯಾಚರಣೆಯ ನಡೆಸಿದ್ದಾರೆಂಬ ಆರೋಪವನ್ನ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಮಾಡಲಾಗಿತ್ತು. ಆದರೆ ಆರೋಪವನ್ನ ನಿರಕರಿಸಿರುವ ರಿಯಲ್ ಎಸ್ಟೇಟ್ ಉದ್ಯಮಿ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸುಳ್ಳು ಆರೋಪ ಮಾಡುತ್ತಿರುವುದ್ದಾಗಿ ಹೇಳಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಟಿ.ಹೊಸಹಳ್ಳಿ ನಿವಾಸಿ ಆಂಜಿನಪ್ಪನವರ 2 ಎಕರೆ 12 ಗುಂಟೆ ಕಬಳಿಸುವ ಸಂಚನ್ನ ಭೂಗಳ್ಳರು ನಡೆಸಿದ್ದಾರೆ, ಆಂಜಿನಪ್ಪನವರ ತಂದೆ ರಾಮಯ್ಯನವರಿಗೆ ಕಾರಾನಾಳ ಸರ್ವೆ ನಂಬರ್ 168 ರಲ್ಲಿ ಸರ್ಕಾರದಿಂದ 2 ಎಕರೆ 12 ಗುಂಟೆ ಜಮೀನು ಮಂಜೂರಾಗಿತ್ತು.
ತಂದೆಯ ನಿಧನ ನಂತರ ಈ ಜಮೀನು ಆಂಜಿನಪ್ಪನವರಿಗೆ ಪೌವತಿ ಖಾತೆ ಆಗಿದೆ, ಇವರ ಜಮೀನು ಪಕ್ಕದಲ್ಲಿ ಸರ್ವೇ ನಂಬರ್ 169 ರಲ್ಲಿ ಗುಣ ಶೇಖರ್ ರವರಿಗೆ ಸೇರಿದ 1 ಎಕರೆ 6 ಗುಂಟೆ ಜಮೀನು ಇದ್ದು, ಜಮೀನಿನ ಉಳಿದ ಭಾಗ ಆಂಜಿನಪ್ಪ ಜಮೀನಿನಲ್ಲಿದೆ ಎಂದು ಸುಳ್ಳು ಆರೋಪ ಮಾಡುವ ರಿಯಲ್ ಎಸ್ಟೇಟ್ ಉದ್ಯಮಿ ಉದ್ಯಮಿಯೊಬ್ಬ ಮಧ್ಯ ಪ್ರವೇಶ ಮಾಡಿ ಕಿರುಕುಳ ಕೊಡುತ್ತಿದ್ದಾರೆ, ಜಮೀನು ಒತ್ತುವರಿ ತೆರವು ಮಾಡಬೇಕಾದರೆ ಸ್ಥಳದಲ್ಲಿ ಸರ್ಕಾರಿ ಅಧಿಕಾರಿಗಳು ಇರಬೇಕು, ಪೊಲೀಸ್ ಬಂದೋಬಸ್ತ್ ಇರಬೇಕು ಮತ್ತು ಜಮೀನು ಒತ್ತುವರಿ ತೆರವು ಮಾಡುವ ಬಗ್ಗೆ ರೈತನಿಗೆ ನೋಟಿಸ್ ನೀಡಬೇಕು, ಆದರೆ ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿದ ರಿಯಲ್ ಎಸ್ಟೇಟ್ ಉದ್ಯಮಿ ತಂಡ ಏಕಾಏಕಿ ಬಂದು ತಂತಿ ಬೇಲಿ ಕೆಡವಿ ಜಮೀನು ಕಬಳಿಸುವ ಸಂಚು ನಡೆಸಿದ್ದಾರೆ ಎಂದು ಆಂಜಿನಪ್ಪ ಕುಟುಂಬ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಮಧು ಮತ್ತು ಆಂಜಿನಪ್ಪ ಮಾಡುತ್ತಿರುವ ಆರೋಪವನ್ನ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಮುನೇಗೌಡ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ, 2015ರಲ್ಲೇ ನಾನು ಸರ್ವೆ ನಂಬರ್ 169ರ ಒಂದು ಎಕರೆ ಜಮೀನನ್ನು ಯಶೋಧಮ್ಮನವರಿಗೆ ಮಾರಿದ್ದೇನೆ, ಗುಂಡಾಗಳನ್ನು ಬಿಟ್ಟು ಒತ್ತುವರಿ ತೆರವು ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಿ, ಅಕ್ಕನ ಗಂಡನೇ ಆಗಬೇಕಿದ್ದ ಆಂಜಿನಪ್ಪ, ಅಕ್ಕನ ಮಗಳ ಮದುವೆಗಾಗಿ 10 ಲಕ್ಷ ಮಗನ ಮದುವೆ 5 ಲಕ್ಷ ಹಣ ಕೊಟ್ಟಿದೆ. ಹಣ ವಾಪಸ್ ಕೇಳಿದಕ್ಕೆ ವಿನಾ ಕಾರಣ ನನ್ನ ವಿರುದ್ದ ಆರೋಪ ಮಾಡುತ್ತಿದ್ದಾರೆ, ಮುಂದೆಯೂ ಇದೇ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಆಂಜಿನಪ್ಪ ಮತ್ತು ಆತನ ಮಗನ ವಿರುದ್ಧ ಕಾನೂನು ಕ್ರಮ ತೆಗೆದು ಕೊಳ್ಳುವ ಎಚ್ಚರಿಕೆಯನ್ನ ನೀಡಿದ್ದಾರೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…