Categories: ವಿಜಯಪುರ

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌

ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ.

ವಿಜಯಪುರ ಜಿಲ್ಲೆ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಯಾದ ಬಾಲಕ.

ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ಪಾಪಿ ತಂದೆ.

6 ವರ್ಷದ ಪುತ್ರ ಸಿದ್ದಾರ್ಥ ನೋಡಲು ನಿನ್ನಂತಿಲ್ಲ, ನಿನ್ನ ಒಂದು ಹೋಲಿಕೆಯೂ ಇಲ್ಲ ಎಂದು ಮಲ್ಲಿಕಾರ್ಜುನ ಅರಕೇರಿಗೆ ಗ್ರಾಮದಲ್ಲಿ ಕೆಲವರು ನಿತ್ಯ ಚೇಡಿಸಿದ್ದರಂತೆ. ಇದರಿಂದಾಗಿ ರೋಸಿಹೋದ ಮಲ್ಲಿಕಾರ್ಜುನ ತನ್ನ 6 ವರ್ಷದ ಪುತ್ರ ಸಿದ್ದಾರ್ಥನನ್ನು ಕಳೆದ ಮಾರ್ಚ್ 16 ರಂದು ಮಹಾರಾಷ್ಟ್ರದ ಕರಾಡ್ ಜಿಲ್ಲೆ ವಡೋಲಿ ಬಳಿ ಕೃಷ್ಣಾ ನದಿ ಬಳಿ ಕರೆದುಕೊಂಡು ಹೋಗಿ ಮಗುವನ್ನ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ..

ಬಳಿಕ ಮಗನನ್ನು‌ ಸಿಂದಗಿ ಬಳಿ ಶಾಲೆಗೆ ಸೇರಿಸಿ ಹಾಸ್ಟೆಲ್ ನಲ್ಲಿ ಇಟ್ಟಿದ್ದಾಗಿ ತಿಳಿಸಿದ್ದಾನೆ. ಏಪ್ರಿಲ್ 1 ರಂದು ಮಗನ ಹುಟ್ಟುಹಬ್ಬದ ದಿನ ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರಿ ಪಟ್ಟುಹಿಡಿದಿದ್ದಾರೆ.

ಮಗ ಎಲ್ಲಿದ್ದಾನೆ ಎಂದು ಕೇಳಿದಾಗ ಮಲ್ಲಿಕಾರ್ಜುನ ಮನೆಯಿಂದ ಓಡಿ ಹೋಗಿದ್ದಾನೆ. ಇದರಿಂದಾಗಿ ಅನುಮಾನ ಬಂದು ಪೊಲೀಸರಿಗೆ ತಾಯಿ ದೂರು ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೊಲೆ ಮಾಡಿರುವುದು ಬಹಿರಂಗ ಮಾಡಿದ್ದಾನೆ. ಮಹಾರಾಷ್ಟ್ರದಲ್ಲಿ ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ.

ಮಾರ್ಚ್ 16 ರಂದು ಕರಾಡ್ ನ ಮಸೂರು ಠಾಣೆ ಪೊಲೀಸರು ಅಪರಿಚಿತ ಬಾಲಕನ ಶವದ ಬಗ್ಗೆ ಪ್ರಕಟಣೆ ಹೊರಡಿಸಿದ್ದರು. ಈ ಪ್ರಕಟಣೆ ಹಾಗೂ ಮಲ್ಲಿಕಾರ್ಜುನ ನೀಡಿದ ಹೇಳಿಕೆ ಆಧಾರದ ಮೇಲೆ‌ ಬಾಲಕನ ಶವ ಪತ್ತೆ ಮಾಡಲಾಗಿದೆ.

ತನಿಖೆ ವೇಳೆ ಬಾಲಕನ ಹತ್ಯೆ ಮಾಡಿರೋದು ಬೆಳಕಿಗೆ ಬಂದಿದೆ…

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

24 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

2 days ago