ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.
ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ.
ವಿಜಯಪುರ ಜಿಲ್ಲೆ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಯಾದ ಬಾಲಕ.
ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ಪಾಪಿ ತಂದೆ.
6 ವರ್ಷದ ಪುತ್ರ ಸಿದ್ದಾರ್ಥ ನೋಡಲು ನಿನ್ನಂತಿಲ್ಲ, ನಿನ್ನ ಒಂದು ಹೋಲಿಕೆಯೂ ಇಲ್ಲ ಎಂದು ಮಲ್ಲಿಕಾರ್ಜುನ ಅರಕೇರಿಗೆ ಗ್ರಾಮದಲ್ಲಿ ಕೆಲವರು ನಿತ್ಯ ಚೇಡಿಸಿದ್ದರಂತೆ. ಇದರಿಂದಾಗಿ ರೋಸಿಹೋದ ಮಲ್ಲಿಕಾರ್ಜುನ ತನ್ನ 6 ವರ್ಷದ ಪುತ್ರ ಸಿದ್ದಾರ್ಥನನ್ನು ಕಳೆದ ಮಾರ್ಚ್ 16 ರಂದು ಮಹಾರಾಷ್ಟ್ರದ ಕರಾಡ್ ಜಿಲ್ಲೆ ವಡೋಲಿ ಬಳಿ ಕೃಷ್ಣಾ ನದಿ ಬಳಿ ಕರೆದುಕೊಂಡು ಹೋಗಿ ಮಗುವನ್ನ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ..
ಬಳಿಕ ಮಗನನ್ನು ಸಿಂದಗಿ ಬಳಿ ಶಾಲೆಗೆ ಸೇರಿಸಿ ಹಾಸ್ಟೆಲ್ ನಲ್ಲಿ ಇಟ್ಟಿದ್ದಾಗಿ ತಿಳಿಸಿದ್ದಾನೆ. ಏಪ್ರಿಲ್ 1 ರಂದು ಮಗನ ಹುಟ್ಟುಹಬ್ಬದ ದಿನ ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರಿ ಪಟ್ಟುಹಿಡಿದಿದ್ದಾರೆ.
ಮಗ ಎಲ್ಲಿದ್ದಾನೆ ಎಂದು ಕೇಳಿದಾಗ ಮಲ್ಲಿಕಾರ್ಜುನ ಮನೆಯಿಂದ ಓಡಿ ಹೋಗಿದ್ದಾನೆ. ಇದರಿಂದಾಗಿ ಅನುಮಾನ ಬಂದು ಪೊಲೀಸರಿಗೆ ತಾಯಿ ದೂರು ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೊಲೆ ಮಾಡಿರುವುದು ಬಹಿರಂಗ ಮಾಡಿದ್ದಾನೆ. ಮಹಾರಾಷ್ಟ್ರದಲ್ಲಿ ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ.
ಮಾರ್ಚ್ 16 ರಂದು ಕರಾಡ್ ನ ಮಸೂರು ಠಾಣೆ ಪೊಲೀಸರು ಅಪರಿಚಿತ ಬಾಲಕನ ಶವದ ಬಗ್ಗೆ ಪ್ರಕಟಣೆ ಹೊರಡಿಸಿದ್ದರು. ಈ ಪ್ರಕಟಣೆ ಹಾಗೂ ಮಲ್ಲಿಕಾರ್ಜುನ ನೀಡಿದ ಹೇಳಿಕೆ ಆಧಾರದ ಮೇಲೆ ಬಾಲಕನ ಶವ ಪತ್ತೆ ಮಾಡಲಾಗಿದೆ.
ತನಿಖೆ ವೇಳೆ ಬಾಲಕನ ಹತ್ಯೆ ಮಾಡಿರೋದು ಬೆಳಕಿಗೆ ಬಂದಿದೆ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…