ತಂದೆಯ ವಿರೋಧದ ನಡುವೆಯೂ ಪ್ರೀತಿಸಿದ ಯುವಕನನ್ನ ಮದುವೆಯಾದ ಯುವತಿ: ಕುಪಿತಗೊಂಡ ತಂದೆ: ಮಗಳು ಮರಣ ಹೊಂದಿದ್ದಾಳೆಂದು ಶ್ರದ್ಧಾಂಜಲಿ ಫೋಟೋ‌ ಬಿಡುಗಡೆ

ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.

ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.

ಈ ವಿಷಯ ತಿಳಿದ ತಂದೆ ಮುರಳಿ, ಮಗಳು ಸತ್ತಿದ್ದಾಳೆ ಎಂದು ಶ್ರದ್ಧಾಂಜಲಿ ಪೋಸ್ಟರ್ ನ್ನು ಮನೆಯ ಹೊರಗೆ ಹಾಕಿದ್ದಾರೆ.

ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.

ನನ್ನ ಮಗಳ ತಲೆ ಕಡೆಸಿ ನನ್ನಿಂದ ದೂರ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಕಾಲೇಜಿಗೆ ಫೀಸ್ ಕಟ್ಟಿ ಓದಲು ಕಳುಹಿಸಿದರೆ ಪ್ರೀತಿಯ ಬಲೆಗೆ ಬಿದ್ದು ನನಗೆ ಮೋಸ ಮಾಡಿ ಹೋಗಿದ್ದಾಳೆ. ಯಾರೂ ತಂದೆ-ತಾಯಿಗೆ ಮೋಸ ಮಾಡಬೇಡಿ. ನನಗೆ ಆಗಿರುವ ಅನ್ಯಾಯ ಯಾವ ಪೋಷಕರಿಗೂ ಆಗಬಾರದು ಎಂದು ಯುವತಿ ತಂದೆ ಮುರಳಿ ಅವರು ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

4 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

8 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

23 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

24 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago