ತಂದೆಯ ವಿರೋಧದ ನಡುವೆಯೂ ಪ್ರೀತಿಸಿದ ಯುವಕನನ್ನ ಮದುವೆಯಾದ ಯುವತಿ: ಕುಪಿತಗೊಂಡ ತಂದೆ: ಮಗಳು ಮರಣ ಹೊಂದಿದ್ದಾಳೆಂದು ಶ್ರದ್ಧಾಂಜಲಿ ಫೋಟೋ‌ ಬಿಡುಗಡೆ

ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.

ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.

ಈ ವಿಷಯ ತಿಳಿದ ತಂದೆ ಮುರಳಿ, ಮಗಳು ಸತ್ತಿದ್ದಾಳೆ ಎಂದು ಶ್ರದ್ಧಾಂಜಲಿ ಪೋಸ್ಟರ್ ನ್ನು ಮನೆಯ ಹೊರಗೆ ಹಾಕಿದ್ದಾರೆ.

ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.

ನನ್ನ ಮಗಳ ತಲೆ ಕಡೆಸಿ ನನ್ನಿಂದ ದೂರ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಕಾಲೇಜಿಗೆ ಫೀಸ್ ಕಟ್ಟಿ ಓದಲು ಕಳುಹಿಸಿದರೆ ಪ್ರೀತಿಯ ಬಲೆಗೆ ಬಿದ್ದು ನನಗೆ ಮೋಸ ಮಾಡಿ ಹೋಗಿದ್ದಾಳೆ. ಯಾರೂ ತಂದೆ-ತಾಯಿಗೆ ಮೋಸ ಮಾಡಬೇಡಿ. ನನಗೆ ಆಗಿರುವ ಅನ್ಯಾಯ ಯಾವ ಪೋಷಕರಿಗೂ ಆಗಬಾರದು ಎಂದು ಯುವತಿ ತಂದೆ ಮುರಳಿ ಅವರು ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

23 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago