ತಂದೆಯ ವಿರೋಧದ ನಡುವೆಯೂ ಪ್ರೀತಿಸಿದ ಯುವಕನನ್ನ ಮದುವೆಯಾದ ಯುವತಿ: ಕುಪಿತಗೊಂಡ ತಂದೆ: ಮಗಳು ಮರಣ ಹೊಂದಿದ್ದಾಳೆಂದು ಶ್ರದ್ಧಾಂಜಲಿ ಫೋಟೋ‌ ಬಿಡುಗಡೆ

ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.

ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.

ಈ ವಿಷಯ ತಿಳಿದ ತಂದೆ ಮುರಳಿ, ಮಗಳು ಸತ್ತಿದ್ದಾಳೆ ಎಂದು ಶ್ರದ್ಧಾಂಜಲಿ ಪೋಸ್ಟರ್ ನ್ನು ಮನೆಯ ಹೊರಗೆ ಹಾಕಿದ್ದಾರೆ.

ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.

ನನ್ನ ಮಗಳ ತಲೆ ಕಡೆಸಿ ನನ್ನಿಂದ ದೂರ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಕಾಲೇಜಿಗೆ ಫೀಸ್ ಕಟ್ಟಿ ಓದಲು ಕಳುಹಿಸಿದರೆ ಪ್ರೀತಿಯ ಬಲೆಗೆ ಬಿದ್ದು ನನಗೆ ಮೋಸ ಮಾಡಿ ಹೋಗಿದ್ದಾಳೆ. ಯಾರೂ ತಂದೆ-ತಾಯಿಗೆ ಮೋಸ ಮಾಡಬೇಡಿ. ನನಗೆ ಆಗಿರುವ ಅನ್ಯಾಯ ಯಾವ ಪೋಷಕರಿಗೂ ಆಗಬಾರದು ಎಂದು ಯುವತಿ ತಂದೆ ಮುರಳಿ ಅವರು ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago