ತಂದೆಯ ಹೃದಯ ಸ್ಪರ್ಶಿ ತ್ಯಾಗ: ಮಗಳ ಜೀವ ರಕ್ಷಿಸಲು ಕಿಡ್ನಿ ದಾನ – ಮೆಡಿಕವರ್ ಆಸ್ಪತ್ರೆಯ ವೈದ್ಯಕೀಯ ಪರಿಣತಿಯ ಮತ್ತೊಂದು ಉದಾಹರಣೆ

ಬೆಂಗಳೂರು, ವೈಟ್‌ಫೀಲ್ಡ್: ಮಗಳಿಗೋಸ್ಕರ ಹೆತ್ತ ತಂದೆ ಏನೂ ಮಾಡೋಕೂ ರೆಡಿ ಅನ್ನೋದಕ್ಕೆ ಸಾಕ್ಷಿಯಂತೆ ಗಂಭೀರ ಸ್ಥಿತಿಯಲ್ಲಿದ್ದ ಮಗಳನ್ನು ರಕ್ಷಿಸಲು ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಿದ್ದಾರೆ. ಮಗಳು ಅನುವಂಶೀಯದಿಂದ ಬರುವ ಬಹು-ಗುಳ್ಳೆ ಮೂತ್ರಪಿಂಡ ರೋಗ ( ADPKD)ದಿಂದ ಬಳಲುತ್ತಾ ಇದ್ದರು .ಇದರಿಂದ ಮೂತ್ರ ಪಿಂಡದ ವೈಫಲ್ಯವಾಗಿತ್ತು .

ಈ ಖಾಯಿಲೆ ಇವರ ಕುಟುಂಬಕ್ಕೆ ಹೊಸದೇನು ಅಲ್ಲ 2013ರಲ್ಲಿ, ಇದೇ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಪತ್ನಿಗೆ ಕಿಡ್ನಿ ದಾನ ಮಾಡಲು ಅವರು ಮುಂದೆ ಬಂದಿದ್ದರು. ಆದರೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಎದುರಿಸಿದ ತಾಂತ್ರಿಕ ಅಡಚಣೆಗಳ ಕಾರಣದಿಂದ ಆ ವೇಳೆ ಕಿಡ್ನಿ ಟ್ರಾನ್ಸ್‌ ಪ್ಲಾಟ್‌ ಮಾಡಲು ಸಾಧ್ಯವಾಗಿರಲಿಲ್ಲ.

ಈಗ ಆ ಸಮಸ್ಯೆ ಮತ್ತೆ ಮಗಳಿಗೆ ಸಂಭವಿಸಿದಾಗ, ಅವರ ಮೂತ್ರಪಿಂಡಗಳು ವೈಫಲ್ಯಗೊಂಡಾಗ, ತಂದೆಯವರು ಕ್ಷಣಮಾತ್ರವೂ ಯೋಚಿಸದೇ – ತಮ್ಮ ಏಕೈಕ ಮಗಳನ್ನು ಉಳಿಸಲು ಮತ್ತೆ ಮುಂದೆ ಬಂದರು.

61 ವರ್ಷದ ತಂದೆಗೆ ಮಧುಮೇಹ ಮತ್ತು ರಕ್ತದೊತ್ತಡ ತೊಂದರೆ ಇದ್ದರೂ, ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಸಮಗ್ರ ಪರೀಕ್ಷೆಯಲ್ಲಿ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಅಂಗ ಹಾನಿಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಬಹು ವಿಶಿಷ್ಟ ತಂಡ ನಡೆಸಿದ ವಿಮರ್ಶೆಯ ನಂತರ, ಅವರನ್ನು ಮಾರ್ಜಿನಲ್ ಡೋನರ್ ಎಂದು ಸ್ವೀಕರಿಸಲಾಯಿತು.

ಈ ಜೀವ ರಕ್ಷಕ ಶಸ್ತ್ರಚಿಕಿತ್ಸೆಯನ್ನುಡಾ. ಹರೀಶ ಬಾಬು ಕೆ – ಹಿರಿಯ ನೇಫ್ರಾಲಜಿಸ್ಟ್ ಮತ್ತು ಟ್ರಾನ್ಸ್‌ಪ್ಲಾಂಟ್ ತಜ್ಞ, ಡಾ. ಪ್ರಮೊದ್ – ಯೂರಾಲಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟ್ ತಜ್ಞ, ಡಾ. ದಿಲೀಪ್ – ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸಕ ಇವರ ತಂಡ ಯಶಸ್ವಿಯಾಗಿ ನೆರವೇರಿಸಿದರು.ದಾನ ಮಾಡಿದ ಕಿಡ್ನಿ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.

“ಸಮಗ್ರ ಮತ್ತು ನಿಖರವಾದ ವೈದ್ಯಕೀಯ ಮೌಲ್ಯಮಾಪನದ ಮೂಲಕ, ನಿಯಂತ್ರಣದಲ್ಲಿರುವ ಮಧುಮೇಹ ಮತ್ತು ರಕ್ತದೊತ್ತಡವಿದ್ದರೂ ಸಹ ಹಿರಿಯ ದಾನಿಗಳನ್ನುಸುರಕ್ಷಿತವಾಗಿ ಕಿಡ್ನಿ ದಾನಕ್ಕಾಗಿ ಪರಿಗಣಿಸಬಹುದು. ಇದು ಸೂಕ್ತ ದಾನಿಗಳ ಕೊರತೆಯಿಂದ ಬಳಲುವ ಅನೇಕ ಕುಟುಂಬಗಳಿಗೆ ಹೊಸ ಆಶಾಕಿರಣವಾಗಿದೆ,” ಎಂದು ಡಾ. ಹರೀಶ ಬಾಬು ಕೆ ತಿಳಿಸಿದ್ದಾರೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

5 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

5 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

7 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

11 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

11 hours ago