ತಂದೆಯ ಹೃದಯ ಸ್ಪರ್ಶಿ ತ್ಯಾಗ: ಮಗಳ ಜೀವ ರಕ್ಷಿಸಲು ಕಿಡ್ನಿ ದಾನ – ಮೆಡಿಕವರ್ ಆಸ್ಪತ್ರೆಯ ವೈದ್ಯಕೀಯ ಪರಿಣತಿಯ ಮತ್ತೊಂದು ಉದಾಹರಣೆ

ಬೆಂಗಳೂರು, ವೈಟ್‌ಫೀಲ್ಡ್: ಮಗಳಿಗೋಸ್ಕರ ಹೆತ್ತ ತಂದೆ ಏನೂ ಮಾಡೋಕೂ ರೆಡಿ ಅನ್ನೋದಕ್ಕೆ ಸಾಕ್ಷಿಯಂತೆ ಗಂಭೀರ ಸ್ಥಿತಿಯಲ್ಲಿದ್ದ ಮಗಳನ್ನು ರಕ್ಷಿಸಲು ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಿದ್ದಾರೆ. ಮಗಳು ಅನುವಂಶೀಯದಿಂದ ಬರುವ ಬಹು-ಗುಳ್ಳೆ ಮೂತ್ರಪಿಂಡ ರೋಗ ( ADPKD)ದಿಂದ ಬಳಲುತ್ತಾ ಇದ್ದರು .ಇದರಿಂದ ಮೂತ್ರ ಪಿಂಡದ ವೈಫಲ್ಯವಾಗಿತ್ತು .

ಈ ಖಾಯಿಲೆ ಇವರ ಕುಟುಂಬಕ್ಕೆ ಹೊಸದೇನು ಅಲ್ಲ 2013ರಲ್ಲಿ, ಇದೇ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಪತ್ನಿಗೆ ಕಿಡ್ನಿ ದಾನ ಮಾಡಲು ಅವರು ಮುಂದೆ ಬಂದಿದ್ದರು. ಆದರೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಎದುರಿಸಿದ ತಾಂತ್ರಿಕ ಅಡಚಣೆಗಳ ಕಾರಣದಿಂದ ಆ ವೇಳೆ ಕಿಡ್ನಿ ಟ್ರಾನ್ಸ್‌ ಪ್ಲಾಟ್‌ ಮಾಡಲು ಸಾಧ್ಯವಾಗಿರಲಿಲ್ಲ.

ಈಗ ಆ ಸಮಸ್ಯೆ ಮತ್ತೆ ಮಗಳಿಗೆ ಸಂಭವಿಸಿದಾಗ, ಅವರ ಮೂತ್ರಪಿಂಡಗಳು ವೈಫಲ್ಯಗೊಂಡಾಗ, ತಂದೆಯವರು ಕ್ಷಣಮಾತ್ರವೂ ಯೋಚಿಸದೇ – ತಮ್ಮ ಏಕೈಕ ಮಗಳನ್ನು ಉಳಿಸಲು ಮತ್ತೆ ಮುಂದೆ ಬಂದರು.

61 ವರ್ಷದ ತಂದೆಗೆ ಮಧುಮೇಹ ಮತ್ತು ರಕ್ತದೊತ್ತಡ ತೊಂದರೆ ಇದ್ದರೂ, ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಸಮಗ್ರ ಪರೀಕ್ಷೆಯಲ್ಲಿ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಅಂಗ ಹಾನಿಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಬಹು ವಿಶಿಷ್ಟ ತಂಡ ನಡೆಸಿದ ವಿಮರ್ಶೆಯ ನಂತರ, ಅವರನ್ನು ಮಾರ್ಜಿನಲ್ ಡೋನರ್ ಎಂದು ಸ್ವೀಕರಿಸಲಾಯಿತು.

ಈ ಜೀವ ರಕ್ಷಕ ಶಸ್ತ್ರಚಿಕಿತ್ಸೆಯನ್ನುಡಾ. ಹರೀಶ ಬಾಬು ಕೆ – ಹಿರಿಯ ನೇಫ್ರಾಲಜಿಸ್ಟ್ ಮತ್ತು ಟ್ರಾನ್ಸ್‌ಪ್ಲಾಂಟ್ ತಜ್ಞ, ಡಾ. ಪ್ರಮೊದ್ – ಯೂರಾಲಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟ್ ತಜ್ಞ, ಡಾ. ದಿಲೀಪ್ – ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸಕ ಇವರ ತಂಡ ಯಶಸ್ವಿಯಾಗಿ ನೆರವೇರಿಸಿದರು.ದಾನ ಮಾಡಿದ ಕಿಡ್ನಿ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.

“ಸಮಗ್ರ ಮತ್ತು ನಿಖರವಾದ ವೈದ್ಯಕೀಯ ಮೌಲ್ಯಮಾಪನದ ಮೂಲಕ, ನಿಯಂತ್ರಣದಲ್ಲಿರುವ ಮಧುಮೇಹ ಮತ್ತು ರಕ್ತದೊತ್ತಡವಿದ್ದರೂ ಸಹ ಹಿರಿಯ ದಾನಿಗಳನ್ನುಸುರಕ್ಷಿತವಾಗಿ ಕಿಡ್ನಿ ದಾನಕ್ಕಾಗಿ ಪರಿಗಣಿಸಬಹುದು. ಇದು ಸೂಕ್ತ ದಾನಿಗಳ ಕೊರತೆಯಿಂದ ಬಳಲುವ ಅನೇಕ ಕುಟುಂಬಗಳಿಗೆ ಹೊಸ ಆಶಾಕಿರಣವಾಗಿದೆ,” ಎಂದು ಡಾ. ಹರೀಶ ಬಾಬು ಕೆ ತಿಳಿಸಿದ್ದಾರೆ.

Ramesh Babu

Journalist

Recent Posts

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

34 minutes ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

3 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

3 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

10 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

11 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

22 hours ago