ಬೆಂಗಳೂರು, ವೈಟ್ಫೀಲ್ಡ್: ಮಗಳಿಗೋಸ್ಕರ ಹೆತ್ತ ತಂದೆ ಏನೂ ಮಾಡೋಕೂ ರೆಡಿ ಅನ್ನೋದಕ್ಕೆ ಸಾಕ್ಷಿಯಂತೆ ಗಂಭೀರ ಸ್ಥಿತಿಯಲ್ಲಿದ್ದ ಮಗಳನ್ನು ರಕ್ಷಿಸಲು ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಿದ್ದಾರೆ. ಮಗಳು ಅನುವಂಶೀಯದಿಂದ ಬರುವ ಬಹು-ಗುಳ್ಳೆ ಮೂತ್ರಪಿಂಡ ರೋಗ ( ADPKD)ದಿಂದ ಬಳಲುತ್ತಾ ಇದ್ದರು .ಇದರಿಂದ ಮೂತ್ರ ಪಿಂಡದ ವೈಫಲ್ಯವಾಗಿತ್ತು .
ಈ ಖಾಯಿಲೆ ಇವರ ಕುಟುಂಬಕ್ಕೆ ಹೊಸದೇನು ಅಲ್ಲ 2013ರಲ್ಲಿ, ಇದೇ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಪತ್ನಿಗೆ ಕಿಡ್ನಿ ದಾನ ಮಾಡಲು ಅವರು ಮುಂದೆ ಬಂದಿದ್ದರು. ಆದರೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಎದುರಿಸಿದ ತಾಂತ್ರಿಕ ಅಡಚಣೆಗಳ ಕಾರಣದಿಂದ ಆ ವೇಳೆ ಕಿಡ್ನಿ ಟ್ರಾನ್ಸ್ ಪ್ಲಾಟ್ ಮಾಡಲು ಸಾಧ್ಯವಾಗಿರಲಿಲ್ಲ.
ಈಗ ಆ ಸಮಸ್ಯೆ ಮತ್ತೆ ಮಗಳಿಗೆ ಸಂಭವಿಸಿದಾಗ, ಅವರ ಮೂತ್ರಪಿಂಡಗಳು ವೈಫಲ್ಯಗೊಂಡಾಗ, ತಂದೆಯವರು ಕ್ಷಣಮಾತ್ರವೂ ಯೋಚಿಸದೇ – ತಮ್ಮ ಏಕೈಕ ಮಗಳನ್ನು ಉಳಿಸಲು ಮತ್ತೆ ಮುಂದೆ ಬಂದರು.
61 ವರ್ಷದ ತಂದೆಗೆ ಮಧುಮೇಹ ಮತ್ತು ರಕ್ತದೊತ್ತಡ ತೊಂದರೆ ಇದ್ದರೂ, ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದ ಸಮಗ್ರ ಪರೀಕ್ಷೆಯಲ್ಲಿ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಅಂಗ ಹಾನಿಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಬಹು ವಿಶಿಷ್ಟ ತಂಡ ನಡೆಸಿದ ವಿಮರ್ಶೆಯ ನಂತರ, ಅವರನ್ನು ಮಾರ್ಜಿನಲ್ ಡೋನರ್ ಎಂದು ಸ್ವೀಕರಿಸಲಾಯಿತು.
ಈ ಜೀವ ರಕ್ಷಕ ಶಸ್ತ್ರಚಿಕಿತ್ಸೆಯನ್ನುಡಾ. ಹರೀಶ ಬಾಬು ಕೆ – ಹಿರಿಯ ನೇಫ್ರಾಲಜಿಸ್ಟ್ ಮತ್ತು ಟ್ರಾನ್ಸ್ಪ್ಲಾಂಟ್ ತಜ್ಞ, ಡಾ. ಪ್ರಮೊದ್ – ಯೂರಾಲಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್ಪ್ಲಾಂಟ್ ತಜ್ಞ, ಡಾ. ದಿಲೀಪ್ – ಕಿಡ್ನಿ ಟ್ರಾನ್ಸ್ಪ್ಲಾಂಟ್ ಶಸ್ತ್ರಚಿಕಿತ್ಸಕ ಇವರ ತಂಡ ಯಶಸ್ವಿಯಾಗಿ ನೆರವೇರಿಸಿದರು.ದಾನ ಮಾಡಿದ ಕಿಡ್ನಿ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.
“ಸಮಗ್ರ ಮತ್ತು ನಿಖರವಾದ ವೈದ್ಯಕೀಯ ಮೌಲ್ಯಮಾಪನದ ಮೂಲಕ, ನಿಯಂತ್ರಣದಲ್ಲಿರುವ ಮಧುಮೇಹ ಮತ್ತು ರಕ್ತದೊತ್ತಡವಿದ್ದರೂ ಸಹ ಹಿರಿಯ ದಾನಿಗಳನ್ನುಸುರಕ್ಷಿತವಾಗಿ ಕಿಡ್ನಿ ದಾನಕ್ಕಾಗಿ ಪರಿಗಣಿಸಬಹುದು. ಇದು ಸೂಕ್ತ ದಾನಿಗಳ ಕೊರತೆಯಿಂದ ಬಳಲುವ ಅನೇಕ ಕುಟುಂಬಗಳಿಗೆ ಹೊಸ ಆಶಾಕಿರಣವಾಗಿದೆ,” ಎಂದು ಡಾ. ಹರೀಶ ಬಾಬು ಕೆ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…